May 14, 2024

MALNAD TV

HEART OF COFFEE CITY

ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ಮತ್ತೆ ದೂರು

1 min read

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಚಿಕ್ಕಮಗಳೂರು ಲೋಕಾಯುಕ್ತದಲ್ಲಿ ಮತ್ತೆ ದೂರು ದಾಖಲಾಗಿದೆ. ಕಳೆದ ಎಂಟು ದಿನಗಳ ಹಿಂದೆ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಕೊಪ್ಪ ತಾಲೂಕಿನ ವಿಜಯಾನಂದ ಎಂಬವರು ರಾಜೇಗೌಡ ಅವರ ಅಕ್ರಮ ಆಸ್ತಿ ಗಳಿಕೆಯ ಬಗ್ಗೆ ದೂರು ನೀಡಿದರು. ಆದರೆ ದೂರು ನೀಡಿದ ಒಂದೇ ವಾರದಲ್ಲಿ ದೂರನ್ನು ಹಿಂಪಡೆದಿದ್ದರು. ಆದರೆ ಇಂದು ಮತ್ತೆ ಚಿಕ್ಕಮಗಳೂರು ಲೋಕಾಯುಕ್ತದಲ್ಲಿ ಕೊಪ್ಪ ತಾಲೂಕಿನ ದಿನೇಶ್ ಹೊಸೂರು ಎಂಬುವರು ಶಾಸಕ ರಾಜೇಗೌಡ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಾಸಕ ರಾಜೇಗೌಡ ಅವರು 2018ರಲ್ಲಿ ನನ್ನ ವಾರ್ಷಿಕ ಆದಾಯ 35 ಲಕ್ಷ ಎಂದು ತೋರಿಸಿದ್ದಾರೆ. 22-23ರಲ್ಲಿ 40 ಲಕ್ಷ ಎಂದಿದ್ದಾರೆ. ಆದರೆ, ಶಬಾನ ರಂಜಾನ್ ಎಂಬ ಸಂಸ್ಥೆಯ ಮೂಲಕ 123 ಕೋಟಿಯಷ್ಟು ಅಕ್ರಮ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ವಾರ್ಷಿಕ ಆದಾಯ 35-40 ಲಕ್ಷ ಇರುವಾಗ 123 ಕೋಟಿ ಆಸ್ತಿ ಖರೀದಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕೆಂದು ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!