April 29, 2024

MALNAD TV

HEART OF COFFEE CITY

ಮೂಡಿಗೆರೆಯಲ್ಲಿ ಮತ್ತೊಂದು ಆನೆ ದಾಳಿ, ದಂಪತಿ ಸಾವಿನಿಂದ ಪಾರು, ಸ್ಥಳಿಯರ ಆಕ್ರೋಶ

1 min read

African elephant (Loxodonta). Ngorongoro Crater, Tanzania, Africa

ಕಾಫಿನಾಡು ಚಿಕ್ಕಮಗಳೂರಲ್ಲಿ ಹೊಲದಲ್ಲಿ ರಾಗಿ ಕಾಯುತ್ತಾ ಮಲಗಿದ್ದ ರೈತನ ಮೇಲೆ ಕಾಡಾನೆ ದಾಳಿ ಮಾಡಿ ಕೊಂದ ಘಟನೆ ನಡೆದು 24 ಗಂಟೆಯೂ ಆಗಿಲ್ಲ. ಮತ್ತೊಂದು ಆನೆ ದಾಳಿ ಪ್ರಕರಣ ದಾಖಲಾಗಿದೆ. ನಿನ್ನೆ ತಾನೇ ತರೀಕೆರೆ ತಾಲೂಕಿನ ರಾಗಿಬಸವನಹಳ್ಳಿಯಲ್ಲಿ ಹೊಲದಲ್ಲಿ ರಾಗಿ ಕಾಯುತ್ತಿದ್ದ 65 ವರ್ಷದ ಈರಣ್ಣ ಎಂಬುವರನ್ನ ಕಾಡಾನೆ ಕೊಂದಿತ್ತು. ಇಂದು ಬೆಳಗ್ಗೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪ ರಸ್ತೆ ಆಶ್ರಯ ಪಡೆದಿದ್ದವರ ಮೇಲೆ ಕಾಡಾನೆ ದಾಳಿ ಮಾಡಿದೆ. ಆದ್ರೆ, ಅದೃಷ್ಟವಶಾತ್ ಮೂವರು ಸಾವಿನಿಂದ ಪಾರಾಗಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಗರೆ ಮೂಲದ ನಾಗವಲ್ಲಿ ಹಾಗೂ ಗಂಡುಗುಸೆ ಎಂಬ ದಂಪತಿ ಕೂಲಿ ಕೆಲಸಕ್ಕೆಂದು ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮಕ್ಕೆ ಬಂದಿದ್ದರು.

ಬಣಕಲ್ ಗ್ರಾಮದ ಪಶು ಆಸ್ಪತ್ರೆ ಬಳಿ ಟೆಂಟ್ ಹಾಕಿಕೊಂಡು ಮಲಗಿದ್ದಾಗ ಕಾಡಾನೆ ದಾಳಿ ಮಾಡಿದೆ. ಅದೃಷ್ಟವಶಾತ್ ದಂಪತಿ ಹಾಗೂ ಮತ್ತೊಬ್ಬರು ಮೂವರು ಸಾವಿನಿಂದ ಪಾರಾಗಿದ್ದಾರೆ. ನಾಗವಲ್ಲಿ ಹಾಗೂ ಗಂಡುಗುಸೆ ದಂಪತಿಗೆ ತೀವ್ರ ಗಾಯವಾಗಿದ್ದು, ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲಿಂದ ಮೇಲೆ ಕಾಡಾನೆಗಳ ಹಾವಳಿ ಹೆಚ್ಚುತ್ತಿದ್ದರು ಆನೆ ಹಾವಳಿ ಬಗ್ಗೆ ಸೂಕ್ತ ಕ್ರಮಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!