ಕಾಫಿನಾಡಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ.
1 min read
ಕಳೆದ ಎರಡು ತಿಂಗಳಲ್ಲಿ ಮೂರು ಜನ ಕಾಡಾನೆ ದಾಳಿಗೆ ಬಲಿಯಾಗಿದ್ದು 20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಇಬ್ಬರ ಸಾವನ್ನಪ್ಪಿದಂತಾಗಿದೆ ಆದರೆ ಈ ಬಾರಿ ಆನೆ ನಿಗ್ರಹ ಪಡೆಯ ಸದಸ್ಯನೇ ಆನೆ ದಾಳಿಗೆ ಮೃತಪಟ್ಟರುವುದು ವಿಶೇಷವಾಗಿದೆ.ಕಾರ್ತಿಕ್ ಗೌಡ (26) ಮೃತ ದುರ್ದೈವಿಯಾಗಿದ್ದು ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತಪಟ್ಟ ಕಾರ್ತಿಕ್ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ, ಸರ್ಕಾರವೇ ರಚನೆ ಮಾಡಿರುವ ಆನೆ ನಿಗ್ರಹ ಪಡೆಯಲ್ಲಿ ಮೃತ ಕಾರ್ತಿಕ್ ಕೆಲಸ ಮಾಡುತ್ತಿದ್ದರು ಬೈರಾಪುರದಲ್ಲಿ ಆನೆ ಓಡಿಸುವಾಗ ಆನೆ ದಾಳಿ ನಡೆಸಿದ ಪರಿಣಾಮ ಸಾವು ಸಂಭವಿಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿಯೇ ಸಾವನ್ನಪ್ಪಿರುವುದಕ್ಕೆ ಸ್ಥಳಿಯರು ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿದರು.
20 ದಿನದ ಹಿಂದೆ ಆಲ್ದೂರಿನಲ್ಲಿ ವೀಣಾ ಎಂಬ ಮಹಿಳೆ ಕಾಡಾನೆ ದಾಳಿಗೆ ಮೃತಪಟ್ಟಿದ್ದರು. ಇಂದು ಮೂಡಿಗೆರೆಯ ಬೈರಾಪುರದಲ್ಲಿ ಕಾರ್ತಿಕ್ ಸಾವನ್ನಪ್ಪಿರುವುದು ಮಲೆನಾಡಿಗರಲ್ಲಿ ಆನೆ ದಾಳಿಗೆ ಮತ್ತೆಷ್ಟು ಬಳಿ ಬೇಕು ಎಂಬ ಪ್ರಶ್ನೆ ಉದ್ಬವಿಸುವಂತೆ ಮಾಡಿದೆ. ಒಂದೂವರೆ ತಿಂಗಳ ಹಿಂದೆ ಆಲ್ದೂರು ಸಮೀಪ ಚಿನ್ನಿ ಎಂಬುವರು ಸಾವಿಗೀಡಾಗಿರುವುದು ಸೇರಿದಂತೆ ಮೂರು ಬಲಿಯಾದಂತಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g