ಕಾಡಾ ಅಧ್ಯಕ್ಷರಾಗಿ ನೇಮಕ ನಂತರವೂ ಈಗಲೂ ನಾನು ಎಂ.ಪಿ ಟಿಕೆಟ್ ಪ್ರಬಲ ಆಕಾಂಕ್ಷಿ ಎಂದ ಅಂಶುಮಂತ್
1 min readಚಿಕ್ಕಮಗಳೂರು: ರಾಜ್ಯ ಸರ್ಕಾರ ಕಾಡಾ ಅಧ್ಯಕ್ಷರಾಗಿ ನೇಮಕ ಮಾಡಿದ ನಂತರವೂ ನಾನು ಈಗಲೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೆ ಪ್ರಬಲ ಆಕಾಂಕ್ಷಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ . ಅಂಶುಮಂತ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷವು ಅಭ್ಯರ್ಥಿಯನ್ನು ಶೀಘ್ರ ಘೋಷಿಸುವ ಭರವಸೆ ಇದೆ ಎಂದು ಅವರು ತಿಳಿಸಿದರು.
ನಿಗಮ ಮಂಡಳಿಗೆ ಅಧ್ಯಕ್ಷರ ಪಟ್ಟಿ ಬಿಡುಗಡೆಯಾಗಿದ್ದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಪಿ ಅಂಶುಮಂತ್ ಹೆಸರು (ಕಾಡಾ) ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದ ಪಟ್ಟಿಯಲ್ಲಿದೆ, ಈ ನಡುವೆಯೂ ಈಗಲೂ ನಾನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದು ಅಂಶುಮಂತ್ ಹೇಳಿದ್ದಾರೆ. ಟಿಕೆಟ್ ಗಾಗಿ ತೀವ್ರ ಲಾಬಿ ನಡೆಸುತ್ತಿದ್ದ ಅವರಿಗೆ ಸಮಾಧಾನ ಪಡಿಸಲು ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದರೂ ಅಂಶುಮಂತ್ ಇನ್ನೂ ಸಮಾಧಾನ ಗೊಂಡಂತೆ ಕಾಣುತ್ತಿಲ್ಲ. ಕಾಡಾ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿರುವುದಕ್ಕೆ ಕಾಂಗ್ರೆಸ್ ನಾಯಕತ್ವಕ್ಕೆ ಆಭಾರಿ ಋಣಿಯಾಗಿದ್ದೇನೆ ಎಂದಿರುವ ಕೆ.ಪಿ ಅಂಶುಮಂತ್ ಈಗಲೂ ನಾನು ಲೋಕಸಭಾ ಟಿಕೆಟ್ ಗೆ ಪ್ರಬಲ ಆಕಾಂಕ್ಷಿಯಾಗಿದ್ದು, ಇಡೀ ಕ್ಷೇತ್ರವನ್ನು ಓಡಾಡುತ್ತಿದ್ದೇನೆ ಪಕ್ಷದಲ್ಲಿ ನನ್ನ ಮಾರ್ಗದರ್ಶಕರು ಹೇಳಿದಂತೆ ನಡೆದುಕೊಳ್ಳುತ್ತೇನೆ. ಕಾಂಗ್ರೆಸ್ ಪಕ್ಷ ಉಡುಪಿ ಚಿಕ್ಕಮಗಳೂರು ಲೋಕಸಭಾ ಟಿಕೆಟ್ ಕುರಿತಂತೆ ಒಳ್ಳೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬ ಭರವಸೆ ಇದೆ ಯಾರೇ ಅಭ್ಯರ್ಥಿ ಯಾದರೂ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಶಕ್ತಿಮೀರಿ ಶ್ರಮಿಸುತ್ತೇನೆ ಎಂದು ಕೆ.ಪಿ ಅಂಶುಮಂತ್ ತಿಳಿಸಿದ್ದಾರೆ. ಈ ನಡುವೆ ಕಾಡಾ ಪ್ರಾಧಿಕಾರ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಕಾಂಗ್ರೆಸ್ ಮುಖಂಡರಿಗೆ ಆಭಾರಿಯಾಗಿದ್ದು ಋಣಿಯಾಗಿದ್ದೇನೆ ಎಂದಿರುವ ಅವರು ರೈತರ ಪರ ಕೆಲಸ ಮಾಡಲು ಅವಕಾಶ ಕೊಟ್ಟಿರುವುದಕ್ಕೆ ಧನ್ಯವಾದ ತಿಳಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g