ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ, ದತ್ತಜಯಂತಿಗಾಗಿ ತಾತ್ಕಾಲಿಕ ಆಯ್ಕೆ, ಸಂಭ್ರಮಿಸಿದ ಬಿಜೆಪಿ
1 min read
ಚಿಕ್ಕಮಗಳೂರು. ಹಿಂದೂಗಳ ದಶಕಗಳ ಕನಸು ಹಾಗೂ ಹೋರಾಟಕ್ಕೆ ತಾತ್ಕಾಲಿಕ ಜಯ ಸಿಕ್ಕಿದೆ. ಸುಮಾರು ಮೂರ್ನಾಲ್ಕು ದಶಕಗಳಿಂದ ಹಿಂದೂ ಸಂಘಟನೆಗಳು ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವಾಗಬೇಕೆಂದು ಹೋರಾಡುತ್ತಿದ್ದರು. ಮೂರ್ನಾಲ್ಕು ದಶಕಗಳ ಹೋರಾಟದ ಫಲವಾಗಿ ಇಂದು ರಾಜ್ಯ ಸರ್ಕಾರ ಅದು ಕೂಡ ದತ್ತಜಯಂತಿಗೆ ಹಿಂದೂ ಅರ್ಚಕರ ನೇಮಕ ಮಾಡಿರೋದು ಬಿಜೆಪಿ ಹಾಗೂ ಹಿಂದೂಸಂಘಟನೆಗಳಿಗೆ ಡಬಲ್ ಖುಷಿ ತಂದಿದೆ. ಈ ಮೂಲಕ 2018ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ ಎಂದು ಹೇಳಿತ್ತು. ಅದರಂತೆ ಕೊಟ್ಟ ಮಾತನ್ನ ಉಳಿಸಿಕೊಂಡಿದೆ. ದತ್ತಪೀಠದ ಹಿಂದೂ ಅರ್ಚಕರಾಗಲು ಇಬ್ಬರು ಅರ್ಜಿ ಹಾಕಿದ್ದರು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಎಂಬ ಇಬ್ಬರು ಅರ್ಜಿ ಹಾಕಿದ್ದರು. ದತ್ತಜಯಂತಿಗೆ ತುರ್ತಾಗಿ, ತಾತ್ಕಾಲಿಕಕ್ಕೆ ಇಬ್ಬರು ಬೇಕಿದ್ದ ಕಾರಣ ಆ ಇಬ್ಬರನ್ನೇ ಸರ್ಕಾರ ದತ್ತಪೀಠಕ್ಕೆ ಹಿಂದೂ ಅರ್ಚಕರಾಗಿ ನೇಮಕ ಮಾಡಿ ಆದೇಶಿಸಿದೆ.
ಆದರೆ, ಈ ಆಯ್ಕೆ ತಾತ್ಕಾಲಿಕ. ಮೂರು ದಿನದ ದತ್ತಜಯಂತಿ ಕಾರ್ಯಕ್ರಮಕ್ಕಾಗಿ ಅಷ್ಟೆ. ಡಿಸೆಂಬರ್ 1ರಂದು ಹೈಕೋರ್ಟ್ ದತ್ತಪೀಠದಲ್ಲಿ ಆಡಳಿತ ಸಮಿತಿಯ ನಿರ್ಧಾರದಂತೆ ಪೂಜೆ-ಪುನಸ್ಕಾರಗಳು ನಡೆಯಬೇಕೆಂದು ಆದೇಶ ನೀಡಿದ ಹಿನ್ನೆಲೆ, ಆಡಳಿತ ಮಂಡಳಿ ಕೂಡ ಹಿಂದೂ ಅರ್ಚಕರ ಪೂಜೆಯೊಂದಿಗೆ ದತ್ತಜಯಂತಿ ಆಚರಣೆಗೆ ನಿರ್ಧರಿಸಿತ್ತು. ಹಾಗಾಗಿ, ರಾಜ್ಯ ಸರ್ಕಾರ ಕೂಡ ಮೂರು ದಿನದ ಮಟ್ಟಿಗೆ ಇಬ್ಬರು ಅರ್ಚಕರನ್ನ ನೇಮಕ ಮಾಡಿ ಆದೇಶಿಸಿದೆ. ದತ್ತಪೀಠಕ್ಕೆ ಶಾಶ್ವತ ಅರ್ಚಕರ ನೇಮಕಕ್ಕೆ ಕನಿಷ್ಠ ಎರಡರಿಂದ ಮೂರು ತಿಂಗಳು ಕಾಲಾವಕಾಶ ಬೇಕು. ಪೇಪರ್ ನೋಟಿಫಿಕೇಶನ್ ಹೊರಡಿಸಬೇಕು. ಟೆಂಡರ್ ಪ್ರೋಸಸ್ ಯಾವ ರೀತಿ ಇರುತ್ತೋ ಅದೇ ರೀತಿ ನಡೆಯಬೇಕು. ಆ ಪ್ರಕ್ರಿಯೆಗೆ ತಡವಾಗುತ್ತೆ ಎಂದು ಸರ್ಕಾರ ದತ್ತಪೀಠದಲ್ಲಿ ಇದೇ ಡಿಸೆಂಬರ್ 6-7-8 ರಂದು ನಡೆಯುವ ದತ್ತಜಯಂತಿಗಾಗಿ ಇಬ್ಬರು ಅರ್ಚಕರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರದ ನಡೆಯನ್ನ ಸ್ವಾಗತಿಸಿದೆ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g