May 11, 2024

MALNAD TV

HEART OF COFFEE CITY

ಆನೆ ದಾಳಿಗೆ ಸೂಕ್ತ ಪರಿಹಾರ ನೀಡಲಾಗುವುದು; ಸಿಎಂ ಸಿದ್ದರಾಮಯ್ಯ

1 min read

ಚಿಕ್ಕಮಗಳೂರು: ಆನೆ ದಾಳಿಯಿಂದ ಮಹಿಳೆ ಸಾವು ಪ್ರಕರಣ ಹಿನ್ನಲೆ ಸಾವನಪ್ಪಿದವರಿಗೆ ಸೂಕ್ತ ಪರಿಹಾರ ನೀಡಲಾಗುತ್ತೆದೆ ಎಂದು ಸಿಎಂ ಸಿದ್ದರಾಮಯ್ಯ ಮೂಡಿಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ನಿಧನ ಹಿನ್ನೆಲೆ ಮೂಡಿಗೆರೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಆನೆ ದಾಳಿ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಿಭಟನಾಕಾರರ ಜೊತೆ ನಾವು ಮಾತನಾಡಿದ್ದೇನೆ. ಅವರಿಗೆ ಸೂಕ್ತ ಪರಿಹಾರ  ನೀಡಲಾಗುತ್ತೆ. ಅಷ್ಟೇ ಅಲ್ಲದೆ ಆನೆಗಳನ್ನ ಕಾಡಿಗೆ ಓಡಿಸುವ ಪ್ರಕ್ರಿಯೆ ಆರಂಭಿಸುತ್ತೇವೆ. 5 ದಿನದಲ್ಲಿ ಅರಣ್ಯ ಸಚಿವರು ಚಿಕ್ಕಮಗಳೂರಿಗೆ ಬರುತ್ತಾರೆ ಎಂದ ಅವರು ಈ ಸಂಬಂಧ ಜಿಲ್ಲಾಡಳಿತದ ಜೊತೆ ಸಭೆ ನಡೆಸಿದ್ದೇನೆ ಎಂದು ತಿಳಿಸಿದರು.

ಕಿಯೋನಿಕ್ಸ್ ಎಂ.ಡಿ. ಕಡ್ಡಾಯ ರಜೆ ವಿಚಾರ ಹಿನ್ನಲೆ ಆ ವಿಚಾರ ನನಗೆ ಗೊತ್ತಿಲ್ಲ. ಅಪರೇಷನ್ ಕಮಲದ ಡಿಕೆಶಿ ಹೇಳಿಕೆ ಹಿನ್ನಲೆ ಯಾರೇ ಸಂಪರ್ಕ ಮಾಡಿದರೂ ನಮ್ಮ ಶಾಸಕರು ಗಟ್ಟಿಯಾಗಿದ್ದಾರೆ. ಬಿಜೆಪಿಯ ಪ್ರಯತ್ನ ವಿಫಲವಾಗುತ್ತೆ ಎಂದು ಮೂಡಿಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!