ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ಇಬ್ಬರ ಬಂಧನ
1 min read
ಚಿಕ್ಕಮಗಳೂರು : ಮನೆಯ ಹಿಂದಿನ ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ಇಬ್ಬರು ಆರೋಪಿಗಳನ್ನ ಪೊಲೀಸರು ಮಾಲು ಸಮೇತ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಬ್ರಾಹ್ಮಣರ ಬೀದಿಯಲ್ಲಿ ನಡೆದಿದೆ. ಬಂಧಿತರನ್ನ ಭರತ್ ರಾಮ್ ಹಾಗೂ ಶತ್ರುಘ್ನರಾಮ್ ಎಂದು ಗುರುತಿಸಲಾಗಿದೆ. ಮನೆಯ ಹಿಂದಿನ ಹಿತ್ತಲಿನಲ್ಲಿ ಗಾಂಜಾ ಗಿಡ ಬೆಳೆದಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಿನ್ನೆ ದಾಳಿ ಮಾಡಿದ್ದ ಲಿಂಗದಹಳ್ಳಿ ಪೊಲೀಸರು ಮಾಲು ಸಮೇತ ಆರೋಪಿಗಳನ್ನ ಬಂಧಿಸಿದ್ದಾರೆ. 31 ವರ್ಷದ ಭರತ್ ರಾಮ್, 30 ವರ್ಷದ ಶತ್ರುಘ್ನರಾಮ್ ಅವರನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಗಿಡಗಳನ್ನ ಬೆಳೆದಿರುವುದಾಗಿ ಒಪ್ಪಿಕೊಂಡಿರುತ್ತಾರೆ. ಅವರಿಬ್ಬರನ್ನ ವಶಕ್ಕೆ ಪಡೆದ ಪೊಲೀಸರು 710 ಗ್ರಾಂ ಗಾಂಜಾ ಗಿಡವನ್ನ ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಗಾಂಜಾ ಗಿಡಗಳನ್ನ ಬೆಳೆದ ಹಿನ್ನೆಲೆ ಲಿಂಗದಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g