ಅರ್ಜುನ ಆನೆ ಸಾವನ್ನಪ್ಪಲು ಕಾರಣರಾದವರನ್ನು ಬಂಧಿಸಿ; ಕನ್ನಡ ಸೇನೆ ಆಗ್ರಹ
1 min readಚಿಕ್ಕಮಗಳೂರು: ಮೈಸೂರು ದಸರಾ ವೇಳೆ 9 ಅಂಬಾರಿ ಹೊತ್ತು ಇತಿಹಾಸ ಸೃಷ್ಟಿಸಿದ್ದ ಅರ್ಜುನ ಆನೆ ಸಾವನ್ನಪ್ಪಲು ಕಾರಣರಾದವರನ್ನು ಕೂಡಲೇ ಬಂಧಿಸಿ, ಕಾಡಾನೆಗಳ ರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಕನ್ನಡ ಸೇನೆ ಆಗ್ರಹಿಸಿದೆ.
ಮೈಸೂರು ದಸರಾ ಅಂಬಾರಿ 9 ಬಾರಿ ಹೊತ್ತು ಇತಿಹಾಸ ನಿರ್ಮಿಸಿದ್ದ ಅರ್ಜುನ ಆನೆ ಮೃತಪಡಲು ಕಾರಣರಾದ ಕಾಡಾನೆ ಸೆರೆ ಕಾರ್ಯಾಚರಣೆ ಅಧಿಕಾರಿಗಳನ್ನು ಬಂಧಿಸಬೇಕು ಎಂದು ಕನ್ನಡ ಸೇನೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಜಿಲ್ಲಾಧಿಕಾರಿ ಮೂಲಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿದ ಕಾರ್ಯಕರ್ತರು ಕಾಡಾನೆಗಳ ಸಂರಕ್ಷಣೆಗೆ ಯೋಜನೆ ರೂಪಿಸಬೇಕೆಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ರಾಜೇಗೌಡ ಒತ್ತಾಯಿಸಿದ್ದಾರೆ. ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಆಗ್ರಹಿಸಿರುವ ಅವರು ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g