ಹೃದಯಘಾತದಿಂದ ಕಳಸ ಠಾಣೆಯ ಎಎಸ್ಐ ಸಾವು
1 min read
ಚಿಕ್ಕಮಗಳೂರು : ಹೃದಯಘಾತದಿಂದ ಪೊಲೀಸ್ ಅಧಿಕಾರಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ಕಳಸ ಠಾಣೆಯ ಎಎಸ್ಐ ಜಿ.ಕೆ ಮುರಳೀಧರ್ ಹೃದಯಾಘಾತಕದಿಂದ ಸಾವನ್ನಪ್ಪಿದ್ದಾರೆ.ಜಿ.ಕೆ ಮುರಳೀಧರ್ ಅವರು ಕರ್ತವ್ಯ ಮುಗಿಸಿ ಮನೆಯಲ್ಲಿದ್ದಾಗ ಬೆಳಗ್ಗಿನ ಜಾವ ಎದೆನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕಳಸದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಜಿ.ಕೆ ಮುರಳೀಧರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಚಿಕ್ಕಮಗಳೂರು ಜಿಲ್ಲೆ ಕಳಸ ಪಟ್ಟಣದ ಕಳಸ ಠಾಣೆಯ ಎಎಸ್ಐ ಜಿ.ಕೆ ಮುರಳೀಧರ್ ಅವರ ಅಗಲಿಕೆಗೆ ಜಿಲ್ಲಾ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. ಇನ್ನು ಜಿ.ಕೆ ಮುರಳೀಧರ್ ಚಿಕ್ಕಮಗಳೂರು ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದು, ಇಲಾಖೆಯ ಕರ್ತವ್ಯದಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ಉತ್ತಮ ಹೆಸರು ಗಳಿಸಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g