ತಂಬಾಕು ಸೇವನೆ ಹಾಗೂ ಮಾರಾಟ ನಿಷೇಧದ ಕುರಿತು ಜಾಗೃತಿ ಜಾಥ ಹಾಗೂ ಗುಲಾಬಿ ಆಂದೋಲನ
1 min readಚಿಕ್ಕಮಗಳೂರು : ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯ ಹಾನಿ ಹಾಗೂ ಶೈಕ್ಷಣಿಕ ಆವರಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಂಬಾಕು ಸೇವನೆ ಹಾಗೂ ಮಾರಾಟ ನಿಷೇಧದ ಕುರಿತು ವಿದ್ಯಾರ್ಥಿಗಳಿಂದ ಹಮ್ಮಿಕೊಂಡಿದ್ದ ಜಾಗೃತಿ ಜಾಥ ಹಾಗೂ ಗುಲಾಬಿ ಆಂದೋಲನವನ್ನು ತಾಲೂಕು ಕಛೇರಿಯ ಆವರಣದಲ್ಲಿ ಜಿಲ್ಲಾಧಿಕಾರಿಗಳಾದ ಕೆ.ಎನ್. ರಮೇಶ್ ಉದ್ಘಾಟಿಸಿದರು. ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಂಯತ್ರಣ ಕೋಶ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಇಲಾಖೆ, ನರ್ಸಿಂಗ್ ಕಾಲೇಜ್ ಹಾಗು ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯ ಹಾನಿ ಹಾಗೂ ಶೈಕ್ಷಣಿಕ ಆವರಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಂಬಾಕು ಸೇವನೆ ಹಾಗೂ ಮಾರಾಟ ನಿಷೇಧದ ಕುರಿತು ವಿದ್ಯಾರ್ಥಿಗಳಿಂದ ಹಮ್ಮಿಕೊಂಡಿದ್ದ ಜಾಗೃತಿ ಜಾಥವು ನಗರ ಮುಖ್ಯ ರಸ್ತೆಯಲ್ಲಿ ಸಂಚರಿಸಿ ಜನರಲ್ಲಿ ಅರಿವು ಮೂಡಿಸಿದ್ರು. ಹಾಗೂ ಗುಲಾಬಿ ಆಂದೋಲನದ ಅಂಗವಾಗಿ ಬೀದಿ ಬದಿ ಟೀ ವ್ಯಾಪರ ಮಾಡುವ ವ್ಯಕ್ತಿಗೆ ಗುಲಾಬಿ ಹೂ ನೀಡುವ ಮೂಲಕ ತಂಬಾಕು ಸೇವನೆ ಕುರಿತು ಅರಿವು ಮೂಡಿಸಲಾಯಿತು. ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಏಕ ಕಾಲದಲ್ಲಿ ಜಾಗೃತಿ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜನರಲ್ಲಿ ತಂಬಾಕು ಸೇವನೆ ಹಾಗೂ ಮಾರಾಟ ನಿಷೇಧದ ಕುರಿತು ಅರಿವು ಮೂಡಿಸಲು ಈ ಜಾಥ ಸಹಕಾರಿಯಾಗಲಿದೆ ಎಂದು ಹೇಳಿದ್ರು. ನಂತರ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಉಮೇಶ್. ಗುಲಾಬಿ ಆಂದೋಲವನ್ನು ಜಿಲ್ಲಾಡಳಿತ ಹಾಗೂ ವಿದ್ಯಾರ್ಥಿಗಳ ಸಹಕಾರದಲ್ಲಿ ಹಮ್ಮಿಕೊಳ್ಳಲಾಗಿದೆ. ಗುಲಾಬಿಯನ್ನು ತಂಬಾಕು ಮಾರಾಟ ಮಾಡುವವರಿಗೆ ಹಾಗೂ ಸೇವನೆ ಮಾಡುವವರಿಗೆ ಗುಲಾಬಿ ಹೂ ನೀಡುವ ಮೂಲಕ ತಂಬಾಕಿನ ದುಷ್ಪರಿಣಾಮದ ಬಗ್ಗೆ ಪೀತಿಯಿಂದ ಅರಿವು ಮೂಡಿಸುವ ವಿನೂತನ ಕೆಲಸ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g