ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆ;ಜೆಡಿಎಸ್ ಕಾರ್ಯಕರ್ತ ರಾಜೀನಾಮೆ..!
1 min readಚಿಕ್ಕಮಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆ ಅಸಮಾಧಾನಗೊಂಡ ಜೆಡಿಎಸ್ ಕಾರ್ಯಕರ್ತ ಮುಬಾರಕ್ ರಾಜೀನಾಮೆ ನೀಡಿದ್ದಾರೆ.
ಜಿಲ್ಲೆಯ ಕಡೂರು ತಾಲೂಕು ಜೆಡಿಎಸ್ ಅಲ್ಪ ಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಮುಬಾರಕ್ ಜಿಲ್ಲಾಧ್ಯಕ್ಷರಿಗೆ ರಾಜೀನಾಮೆ ಪತ್ರ ಕಳಿಸಿದ್ದಾರೆ. ಕೆಲ ವರ್ಷಗಳಿಂದ ಜೆಡಿಎಸ್ ಸಕ್ರಿಯ ಕಾರ್ಯಕರ್ತನಾಗಿದ್ದ ಮುಬಾರಕ್, ಲೋಕಸಭೆ ಚುನಾವಣೆಯಲ್ಲಿ ಆಗಲಿರುವ ಜೆಡಿಎಸ್ ಪಕ್ಷದ ಆಂತರಿಕ ಬದಲಾವಣೆಗೆ ಮನನೊಂದು ರಾಜೀನಾಮೆ ನೀಡಿದ್ದಾರೆ. ನನ್ನನ್ನು ಬೆಳೆಸಿದ ವೈ.ಎಸ್.ವಿ. ದತ್ತ ಹಾಗೂ ಸಂಸದ ಪ್ರಜ್ವಲ್ ರೇವಣ್ಣಗೆ ಋಣಿ ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g