ಒಳ ಮೀಸಲಾತಿ ವಿರುದ್ಧ ಬಂಜಾರ, ಭೋವಿ ಸಮುದಾಯದ ಪ್ರತಿಭಟನೆ
1 min readಕಡೂರು : ರಾಜ್ಯ ಸರ್ಕಾರವು ಇತ್ತಿಚೆಗೆ ಜಾರಿಗೆ ತರಲು ಉದ್ದೇಶಿಸಿರುವ ಒಳಮೀಸಲಾತಿಯನ್ನು ವಿರೋಧಿಸಿ ಬಂಜಾರ, ಭೋವಿ ಸಮುದಾಯದ ಜನರು ಕಡೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದರು.
ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಹಾಗೂ ಒಳ ಮೀಸಲಾತಿಯನ್ನು ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿದ್ದ ಬಂಜಾರ, ಭೋವಿ ಸಮುದಾಯದ ಮುಖಂಡರು, ಮುಖ್ಯ ರಸ್ತೆಯಲ್ಲಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ, ಕಡೂರು ಪಟ್ಟಣದ ಎಪಿಎಂಸಿ ಆವರಣದಿಂದ ತಾಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿದರು. ಪ್ರತಿಭಟನೆಯಲ್ಲಿ ವರದಿಯ ಹಾಗೂ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಕಾರರು, ತಹಶಿಲ್ದಾರ್ ಕವಿರಾಜ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಮುಖಂಡರು, ಒಳಮೀಸಲಾತಿ ತಿದ್ದುಪಡಿಯನ್ನು ಹಿಂಪಡೆಯುವಂತೆ ಆಗ್ರಹಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g