May 5, 2024

MALNAD TV

HEART OF COFFEE CITY

ಬಂಕೇನಹಳ್ಳಿ: ಸೇತುವೆ ಕಾಮಗಾರಿ ಆರಂಭ

1 min read

ಕೊಟ್ಟಿಗೆಹಾರ:  ನೆರೆ ಪ್ರವಾಹದಿಂದ ಕೊಚ್ಚಿ ಹೋಗಿದ್ದ ಬಂಕೇನಹಳ್ಳಿ ಸೇತುವೆಯ ನೂತನ ಸೇತುವೆ ಕಾಮಗಾರಿ ಆರಂಭವಾಗಿದೆ.ಜೆಸಿಬಿ ಯಂತ್ರಗಳ ಮೂಲಕ ಹಳೆಯ ಸೇತುವೆ ತೆರವುಗೊಳಿಸಲಾಗುತ್ತಿದ್ದು ಸೇತುವೆ ಕಾಮಗಾರಿ ಬಿರುಸಿನಿಂದ ಸಾಗಿದೆ. 2019 ರಲ್ಲಿ ಸುರಿದ ಬಾರಿ ಮಳೆಯಿಂದಾಗಿ ಬಂಕೇನಹಳ್ಳಿ ಸೇತುವೆ ಕೊಚ್ಚಿ ಹೋಗಿ ಬಂಕೇನಹಳ್ಳಿ, ಕೂಡಳ್ಳಿ, ಚೇಗು ಸೇರಿದಂತೆ ಹತ್ತಾರು ಗ್ರಾಮಗಳ ಸಂಪರ್ಕ ಸ್ಥಗಿತಗೊಂಡಿತ್ತು.

ಮಳೆ ಕಡಿಮೆಯಾದ ನಂತರ ಗ್ರಾಮಸ್ಥರು ಅಡಿಕೆ ಮರದಿಂದ ಕಾಲುಸಂಕ ನಿರ್ಮಿಸಿಕೊಂಡಿದ್ದರು. ಆದರೆ ಆನಂತರ ಸುರಿದ ಮಳೆಯಿಂದ ಅಡಿಕೆ ಮರದ ಕಾಲುಸಂಕ ಕೊಚ್ಚಿ ಹೋಗಿ ಗ್ರಾಮಗಳಿಗೆ ಸಂಪರ್ಕವೇ ಇಲ್ಲದಂತಾಗಿತ್ತು. ಗ್ರಾಮಕ್ಕೆ ಜನಪ್ರತಿನಿಧಿಗಳು ಆಗಮಿಸಿದಾಗ ಗ್ರಾಮಸ್ಥರು ಸೇತುವೆ ನಿರ್ಮಿಸುವಂತೆ ಪಟ್ಟು ಹಿಡಿದಿದ್ದರು. ಆ ನಂತರದಲ್ಲಿ ತಾತ್ಕಾಲಿಕ ಕಬ್ಬಿಣದ ಸೇತುವೆ ನಿರ್ಮಿಸಲಾಗಿತ್ತು.
ಆದರೆ ಕಾರು ಮುಂತಾದ ವಾಹನಗಳು ಆ ಸೇತುವೆಯಲ್ಲಿ ಸಂಚರಿಸಲು ಸಾಧ್ಯವಾಗುತ್ತಿರಲಿಲ್ಲ. ಕೆಲದಿನಗಳ ಹಿಂದೆ ಶಾಸಕ ಎಂ.ಪಿ.ಕುಮಾರಸ್ವಾಮಿ ನೂತನ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದು ಸೇತುವೆ ಕಾಮಗಾರಿ ಆರಂಭವಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!