ಬ್ಯಾನರ್ ಕಿರಿಕ್ “ಕೆರೆಗೆ ನೀರು ಹರಿಸಿದ ಭಗಿರಥ” ಪದಕ್ಕೆ ಆಕ್ಷೇಪ
1 min readಚಿಕ್ಕಮಗಳೂರು : ಕೋಡಿ ಬಿದ್ದ ಬೆಳವಾಡಿ ದೊಡ್ಡ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮದ ಬ್ಯಾನರ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಶಾಸಕರ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು.
ಹದಿನೈದು ವರ್ಷಗಳ ತುಂಬಿ ಕೋಡಿ ಬಿದ್ದ ಹಿನ್ನೆಲೆ ಬೆಳವಾಡಿ ದೊಡ್ಡ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಶಾಸಕ ಸಿ.ಟಿ. ರವಿಯವರಿಗೆ ಸ್ವಾಗತಕೋರಿ ಹಾಕಿದ್ದ ಬ್ಯಾನರ್ ನಲ್ಲಿ “ಕೆರೆಗೆ ನೀರು ಹರಿಸಿದ ಭಗಿರಥ” ಎಂದು ಬರೆದಿರುವುದನ್ನು ವಿರೋಧಿಸಿ ಸ್ಥಳೀಯ ಕಾಂಗ್ರೆಸ್ ಮುಖಂಡ ಅಮೀರ್ ಹಾಗೂ ಬೆಂಬಲಿಗರೊಂದಿಗೆ ಶಾಸಕರ ವಿರುದ್ದ ಘೋಷಣೆ ಕೂಗಿದ್ದಲ್ಲದೆ, ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಪ್ರಯತ್ನಿಸಿದರು. ಈ ವೇಳೆ ಬಿ.ಜೆ.ಪಿ. ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಇ ವೇಳೆ ಸ್ಥಳದಲ್ಲಿದ್ದ ಪೊಲೀಸರು ಮಧ್ಯ ಪ್ರವೇಶ ಮಾಡಿ ವಿರೋಧಿಸುತ್ತಿದ್ದವರನ್ನು ಬಂಧಿಸಿ ಕರೆದುಕೊಂಡು ಹೋಗಿ ಪರಿಸ್ಥಿತಿಯನ್ನು ಶಮನಗೊಳಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g