May 19, 2024

MALNAD TV

HEART OF COFFEE CITY

ಪಕ್ಷ ವಿರೋಧಿ ಚಟುವಟಿಕೆ ಮಾಡುವ ಜಾಮಯಾನ ನನ್ನದಲ್ಲ_ಬೀರೂರು ದೇವರಾಜ್

1 min read

 

ಚಿಕ್ಕಮಗಳೂರು: ನಾನು ಪಕ್ಷಕ್ಕೆ ದ್ರೋಹ ಮಾಡುವ ಹಾಗೂ ಪಕ್ಷ ವಿರೋಧಿ ಕೆಲಸ ಮಾಡಿಲ್ಲ. ಪಕ್ಷಕ್ಕೆ ನಿಷ್ಟನಾಗಿ ಪ್ರಾಣೇಶ್ ಗೆಲುವಿಗೆ ದುಡಿಯುತ್ತಿದ್ದೇನೆ ಎಂದು ಬಿಜೆಪಿ ಹಿರಿಯ ಮುಖಂಡ ಬೀರೂರು ದೇವರಾಜ್ ತಿಳಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಈ ಕುರಿತು ಮಾತನಾಡಿದ ಅವರು, ನಾನು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದು ನಿಜ ಆದರೆ ಪಕ್ಷದ ಹಿರಿಯರ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಶಾಸಕ ಬೆಳ್ಳಿ ಪ್ರಕಾಶ್ ಪಕ್ಷದಲ್ಲಿರುವಂತೆ ಮನವೊಲಿಸಿದ ಪರಿಣಾಮ ನಾನು ನಾಮಪತ್ರ ಸಲ್ಲಿಸುವ ತೀರ್ಮಾನದಿಂದ ಹಿಂದೆ ಸರಿದು ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.

ನಾನು ಪಕ್ಷ ವಿರೋಧಿಯಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಆರೋಪ ಮಾಡಲಾಗುತ್ತಿದೆ ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು ನಾನು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದೇನೆ, ಪಕ್ಷ ವಿರೋಧಿಯಾಗಿ ನಡೆದುಕೊಳ್ಳುತ್ತಿಲ್ಲ ಅತ್ಯಂತ ಶ್ರಮದಿಂದ ನಮ್ಮ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಾಣೇಶ್ ಗೆಲುವಿಗಾಗಿ ಶ್ರಮಿಸಲಾಗುತ್ತಿದ್ದು ಪ್ರಾಣೇಶ್ ಅವರು 600 ಮತಗಳಿಂದ ಜಯಶೀಲರಾಗುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

 

ನಾನು ಪೈಟರ್ ನಾಮಪತ್ರ ಸಲ್ಲಿಸಿ ನಂತರ ವಾಪಾಸ್ ತಗೆಯುವ ಜಾಯಮಾನದವನಲ್ಲ ಹಾಗಾಗಿ ಮೊದಲೇ ಪಕ್ಷದ ವರಿಷ್ಟರ ಮಾತಿನಂತೆ ನಾಮಪತ್ರ ಸಲ್ಲಿಸುವ ತೀರ್ಮಾನದಿಂದ ಹಿಂದೆ ಸರಿದು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿದ್ದೇನೆ ಎಂದು ತಿಳಿಸಿದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!