May 12, 2024

MALNAD TV

HEART OF COFFEE CITY

ಬೆಳಗಾವಿ ಅಧಿವೇಶನ: ಬರಗಾಲ ಪೀಡಿತ ಜಿಲ್ಲೆ ಘೋಷಣೆಗೆ ಎಚ್. ಡಿ ತಮ್ಮಯ್ಯ ಒತ್ತಾಯ

1 min read

ಚಿಕ್ಕಮಗಳೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಮತ್ತು ಸಖರಾಯಪಟ್ಟಣ ಹೋಬಳಿಗಳಲ್ಲಿ ಕನಿಷ್ಠ 50 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವಂತೆ ಶಾಸಕ ಎಚ್. ಡಿ ತಮ್ಮಯ್ಯ ಆಗ್ರಹಿಸಿದ್ದಾರೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ  ಭದ್ರಾ ನದಿಯಿಂದ ನೀರನ್ನು ತರುವುದರ ಮೂಲಕ  ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ತುರ್ತಾಗಿ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ಜಲ್ ಜೀವನ್ ಮಿಷನ್ ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸಬೇಕೆಂದು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ  ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ  ಶಾಸಕ ಹೆಚ್‍.ಡಿ ತಮ್ಮಯ್ಯ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಪ್ರಿಯಾಂಕ್ ಖರ್ಗೆ ರವರನ್ನು ಒತ್ತಾಯಿಸಿದ್ದಾರೆ.
ಬರಗಾಲಪೀಡಿತ ತಾಲೂಕಿನ ಪಟ್ಟಿಯಿಂದ ಚಿಕ್ಕಮಗಳೂರನ್ನು ಹೊರಗಿಟ್ಟಿರುವ ಬಗ್ಗೆ ಆಕ್ಷೇಪಿಸಿ ಕೇಂದ್ರ ಸರ್ಕಾರ ನೀಡಿರುವ ಮಾನದಂಡದಿಂದ ಚಿಕ್ಕಮಗಳೂರು ತಾಲೂಕಿನ ರೈತರಿಗೆ ತೀವ್ರ ಅನ್ಯಾಯವಾಗಿದೆ ಎಂದರು. ಈ ಬಗ್ಗೆ  ಪರಿಶೀಲಿಸಿ ಮತ್ತೊಮ್ಮೆ ನಿಯೋಗವನ್ನು ಚಿಕ್ಕಮಗಳೂರು ತಾಲೂಕಿಗೆ ಕಳುಹಿಸಿಕೊಡಲು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ  ಕಂದಾಯ ಸಚಿವರು ಮತ್ತೊಮ್ಮೆ ಪರಿಶೀಲಿಸುವ ಭರವಸೆ ನೀಡಿ ಹಿಂಗಾರು ಹಂಗಾಮಿನಲ್ಲಿ ಮಳೆ ಕಡಿಮೆಯಾದಲ್ಲಿ ಚಿಕ್ಕಮಗಳೂರನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು  ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಭರವಸೆ ನೀಡಿದರು. ಶಾಸಕ ಎಚ್. ಡಿ .ತಮ್ಮಯ್ಯನವರ ಮಾತಿಗೆ ಮೂಡಿಗೆರೆ ಶಾಸಕಿ ನಯನಿ ಮೋಟಮ್ಮ ಧ್ವನಿಗೂಡಿಸಿ ತಕ್ಷಣ ನಿಯೋಗ ಕಳಿಸುವಂತೆ ಒತ್ತಾಯಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!