April 29, 2024

MALNAD TV

HEART OF COFFEE CITY

ಫೆಬ್ರವರಿ 1 ರಂದು ಎಐಟಿಯುಸಿ ವತಿಯಿಂದ ಬೃಹತ್ ಬೆಂಗಳೂರು ಚಲೋ

1 min read

ಚಿಕ್ಕಮಗಳೂರು: All India trade union Congress (AITUC) ವತಿಯಿಂದ ಫೆಬ್ರವರಿ 1 ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಬೆಂಗಳೂರು ಚಲೋ ಹಮ್ಮಿಕೊಂಡಿರುವುದಾಗಿ ವಿವಿಧ ಕಾರ್ಮಿಕ ಸಂಘಟನೆಗಳು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕನಿಷ್ಠ ವೇತನ, ಪೆನ್ಷನ್ ಸೇರಿದಂತೆ ಹತ್ತಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯದ 30 ಜಿಲ್ಲೆಗಳಿಂದ ಆಗಮಿಸಲಿರುವ 25 ಸಾವಿರ ಕ್ಕೂ ಹೆಚ್ಚು ಕಾರ್ಮಿಕರಿಂದ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಮಿಕ ಮುಖಂಡ ಬಿ ಅಮ್ಜದ್ ತಿಳಿಸಿದರು.
ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಅಂಗನವಾಡಿ ಆಶಾ ಕಾರ್ಯಕರ್ತೆಯರು, ಕಟ್ಟಡ ಕಾರ್ಮಿಕರು ಸೇರಿದಂತೆ ಹತ್ತಾರು ಸಂಘಟನೆಗಳು All India trade union Congress (ಎಐಟಿಯುಸಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕಾರ್ಮಿಕ ಮುಖಂಡರು ತಿಳಿಸಿದರು. ಮುಂಬರುವ ಕೇಂದ್ರ ಹಾಗೂ ರಾಜ್ಯ ಬಜೆಟ್ ನಲ್ಲಿ ಕಾರ್ಮಿಕ ಬೇಡಿಕೆಗಳನ್ನ ಈಡೇರಿಸಬೇಕೆಂದು ಈ ಬೃಹತ್ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಆಶಾ ಕಾರ್ಯಕರ್ತರ ಫೆಡರೇಶನ್ ಕಾರ್ಯದರ್ಶಿ ಜಯಮ್ಮ ತಿಳಿಸಿದ್ರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!