ಭಾರೀ ಮಳೆಗೆ ಕೊಚ್ಚಿ ಹೋದ ಬೈಕ್ ಗಳು ತೇಲಿ ಹೋದ ಹಸುಗಳು ಮುಳುಗಿದ ಕಾರು
1 min read
ಭಾರೀ ಮಳೆಯಿಂದಾಗಿ ಕಳಸ ಬಾಳೆಹೊನ್ನೂರು ಸಂಪರ್ಕ ರಸ್ತೆ ಮೇಲೆ ಭಾರೀ ನೀರು ಹರಿದ ಪರಿಣಾಮ ಸುಮಾರು 3 ಗಂಟೆಗೂ ಹೆಚ್ಚು ಕಾಲ ರಸ್ತೆ ಸಂಪರ್ಕ ಕಡಿತಗೊಂಡಿತ್ತು, ಸಂಜೆ ಮಾಗುಂಡಿ ಗ್ರಾಪಂ ವ್ಯಾಪ್ತಿಯ ಮಹಲ್ಗೋಡು ಎಂಬಲ್ಲಿ ಭಾರೀ ಮಳೆ ಸುರಿದಿದೆ. ಬೆಟ್ಟ ಗುಡ್ಡಗಳಲ್ಲಿ ಬಿದ್ದ ಮಳೆ ನೀರು ಮಹಲ್ಗೋಡು ಗ್ರಾಮದಲ್ಲಿ ಹರಿಯುವ ಸಣ್ಣ ಹಳ್ಳಕ್ಕೆ ಬಂದಿದ್ದು, ಹಳ್ಳ ಏಕಾಏಕಿ ತುಂಬಿ ಹರಿದಿದೆ. ಈ ಹಳ್ಳ ಕಳಸ ಬಾಳೆಹೊನ್ನೂರು ಸಂಪರ್ಕದ ಹೆದ್ದಾರಿ ಮಧ್ಯೆ ಇರುವ ಮೋರಿ ಮೂಲಕ ಭದ್ರ ನದಿ ಸೇರುತ್ತದೆ. ಈ ಮೋರಿಯಲ್ಲಿ ಹೂಳು ತುಂಬಿದ ಪರಿಣಾಮ ಸಂಜೆ ಏಕಾಏಕಿ ಹಳ್ಳದಲ್ಲಿ ಭಾರೀ ಪ್ರಮಾಣದಲ್ಲಿ ಹರಿದು ಬಂದ ಮಳೆ ನೀರು ಮೋರಿ ಮೂಲಕ ಹರಿಯದೇ ರಸ್ತೆ ಮೇಲೆಯೇ ಉಕ್ಕಿ ಹರಿದಿದೆ. ಈ ವೇಳೆ ರಸ್ತೆ ಮೇಲಿದ್ದ ಎರಡು ಹಸುಗಳು ಹಳ್ಳದ ನೀರಿನ ರಭಸಕ್ಕೆ ಕೊಚ್ಚಿ ಹೊಗಿದೆ. ರಸ್ತೆ ಮೇಲೆ ಬರುತ್ತಿದ್ದ ಕಾರೊಂದು ನೀರಿಗೆ ಸಿಲುಕಿದ್ದು, ಸ್ಥಳೀಯರು ಕಾರನ್ನು ಸುರಕ್ಷಿತವಾಗಿ ದಡ ಸೇರಿಸಿದ್ದಾರೆ. ದಿಡೀರ್ ನೀರು ಹರಿದು ಬಂದ ಪರಿಣಾಮ ಕಳಸ ಬಾಳೆಹೊನ್ನೂರು ರಸ್ತೆ ಮೇಲೆ ಸುಮಾರು ೪ ಅಡಿಯಷ್ಟು ನೀರು ನಿಂತು ರಸ್ತೆ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಮಹಲಗೋಡು ಗ್ರಾಮದಲ್ಲಿ ಎರಡು ಬದಿಯಲ್ಲಿ ಸುಮಾರು ೫ ಕಿಮೀ ಉದ್ದಕ್ಕೂ ವಾಹನಗಳ ಸರತಿ ಸಾಲು ಕಂಡು ಬಂತು. ಸರಕಾರಿ, ಖಾಸಗಿ ಸಾರಿಗೆ ಬಸ್ ಗಳು, ಪ್ರವಾಸಿಗರ ವಾಹನಗಳು ರಸ್ತೆಯಲ್ಲೆ ನಿಂತು ಸಂಚಾರ ಸ್ಥಬ್ಧ ಗೊಂಡಿತ್ತು. ರಸ್ತೆಯಲ್ಲಿದ್ದ ಎರಡು ಬೈಕ್ಗಳು ನೀರಿನಲ್ಲಿ ಅರ್ದ ಮುಳುಗಿದ್ದ ದೃಶ್ಯ ಕಂಡು ಬಂತು, ಸುಮಾರು ೩ ಗಂಟೆ ಬಳಿಕ ಮಳೆ ಕಡಿಮೆಯಾಗಿದ್ದರಿಂದ ಸ್ಥಳೀಯರು ಮೋರಿಯಲ್ಲಿ ಸಿಲುಕಿಕೊಂಡಿದ್ದ ತ್ಯಾಜ್ಯ, ಕಸ ತೆರವು ಕಾರ್ಯಚರಣೆ ಮಾಡಿದ್ದರಿಂದ ಹೆದ್ದಾರಿಯಲ್ಲಿ ನಿಂತಿದ್ದ ನೀರು ಕಡಿಮೆಯಾಗಿ ವಾಹನ ಸಂಚಾರ ಪುನಾರಂಭಗೊಂಡಿದೆ. ಇತ್ತ
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಾಳೂರು, ಬಣಕಲ್, ಚಾರ್ಮಾಡಿ ಘಾಟ್ ಸುತ್ತಮುತ್ತ ಭಾರೀ ಮಳೆಯಾಗಿದೆ
ನಿರಂತರ ಮಳೆಯಿಂದಾಗಿ ವಾಹನ ಸವಾರರು ಪರದಾಟ ಪಡುವಂತಾಗಿತ್ತು ಕಳೆದೊಂದು ವಾರದಿಂದ ಬಿಡುವು ನೀಡಿದ್ದ ವರುಣದೇವ ಇಂದು ಭಾರೀ ಗಾಳಿಯೊಂದಿಗೆ ಸುರಿದಿದೆ. ಚಾರ್ಮಾಡಿ ಘಾಟಿಯಲ್ಲಿ
ಭಾರಿ ಮಳೆ ಹಿನ್ನೆಲೆ ರಸ್ತೆ ಬದಿ ವಾಹನ ನಿಲ್ಲಿಸಿಕೊಂಡ ಪ್ರಯಾಣಿಕರು ಕೆಲಕಾಲದ ನಂತರ ತೆರಳಿದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g