ನಾಮಪತ್ರ ಸಲ್ಲಿಸಿದ ಬೆಳ್ಳಿ ಪ್ರಕಾಶ್
1 min readಕಡೂರು : ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಗೆಜೆಟ್ ಅಧಿಸೂಚನೆ ಹೊರಡಿಸಿದ ಮೊದಲ ದಿನವಾದ ಇಂದು ಕಡೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬೆಳ್ಳಿ ಪ್ರಕಾಶ್ ಚುನಾವಣಾಧಿಕಾರಿಗಳಿಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.
ಕಡೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಬೆಳ್ಳಿ ಪ್ರಕಾಶ್ ರವರು ನಾಮಪತ್ರ ಸಲ್ಲಿಸುವ ಮುನ್ನ ಬಿಜೆಪಿ ಧ್ವಜಗಳಿಂದ ಸಿಂಗಾರಗೊಂಡು ಕೇಸರಿ ಮಯವಾಗಿದ್ದ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ಬೆಳ್ಳಿ ಪ್ರಕಾಶ್ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೇರಿದಂತೆ ರಾಜ್ಯದ ಮತ್ತು ಜಿಲ್ಲೆಯ ಮುಖಂಡರುಗಳು ಸಾಥ್ ನೀಡಿದರು. ದಾರಿಯುದ್ದಕ್ಕೂ ಸಾಗಿದ ತಮ್ಮ ಸಾವಿರಾರು ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರ ಜೈಕಾರಗಳೊಂದಿಗೆ ಮೆರವಣಿಗೆ ನಡೆಸಿ, ಚುನಾವಣಾಧಿಕಾರಿ ತಿರುಮಲೇಶ್ ರವರಿಗೆ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ನಾಮಪತ್ರ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಬೆಳ್ಳಿ ಪ್ರಕಾಶ್ ಕಳೆದ ಬಾರಿ ಶಾಸಕನಾಗಿ ಕಡೂರು ಕ್ಷೇತ್ರದ ಜನರಿಗೆ ಕೊಟ್ಟಂತ ಮಾತನ್ನು ಕೆಲಸ ಮಾಡುವ ಮೂಲಕ ಚಾಚು ತಪ್ಪದೆ ನಿರ್ವಹಿಸಿದ್ದೀನಿ. ಕ್ಷೇತ್ರವನ್ನೋಮ್ಮೆ ಸುತ್ತಾಡಿದರೆ ಕಳೆದ 5 ವರ್ಷಗಳಲ್ಲಿ ಆಗಿರುವ ಅಭಿವೃದ್ದಿಯನ್ನು ಕಾಣಬಹುದು. ಬೆಳ್ಳಿ ಪ್ರಕಾಶ್ ಒಮ್ಮೆ ಮಾತು ಕೊಟ್ಟರೆ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ನಂಬಿಕೆ ಈ ಕ್ಷೇತ್ರದ ಜನರಿಗಿದೆ. ಎಲ್ಲಾ ಧರ್ಮದ, ಜಾತಿಯ ಜನರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಂತ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಅಭಿವೃದ್ಧಿ ಕೆಲಸಗಳೆ ಮೇ 13 ರಂದು ನಡೆಯುವ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಅತ್ಯಂತ ಹೆಚ್ಚಿನ ಮತವನ್ನು ಕೊಡುವುದರ ಮೂಲಕ ಭಾರತೀಯ ಜನತಾ ಪಾರ್ಟಿಯನ್ನು ಕಡೂರು ಕ್ಷೇತ್ರದಲ್ಲಿ ಮತ್ತೊಮ್ಮೆ ಗೆಲ್ಲಿಸುತ್ತಾರೆ ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g