ಕಾಂಗ್ರೆಸ್ ಅಭ್ಯರ್ಥಿ ಗಾಯಿತ್ರಿ ಶಾಂತೇಗೌಡಗೆ- ಬಿಜೆಪಿ ಅಭ್ಯರ್ಥಿ ಪ್ರಾಣೇಶ್ ಸವಾಲು
1 min readಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾನು ಯಾವುದೇ ಕೆಲಸ ಕಾರ್ಯ ಮಾಡಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಆದರೆ ಅವರು ಸಹ ಆರು ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯರಾಗಿದ್ದವರು. ಅವರ ಕಾಲದಲ್ಲಿ ಗ್ರಾ.ಪಂಗಳಿಗೆ ಯಾವ ಸೌಲಭ್ಯ ನೀಡಿದ್ದಾರೆ ಎಂಬುದನ್ನು ಮಾಹಿತಿ ಬಹಿರಂಗ ಪಡಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಉಪಸಭಾಪತಿ ಹಾಗೂ ಬಿಜೆಪಿ ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಕಾಂಗ್ರೆಸ್ ಅಭ್ಯರ್ಥಿ ಗಾಯಿತ್ರಿ ಶಾಂತೇಗೌಡ ಅವರಿಗೆ ಸವಾಲೆಸೆದರು.
ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ನಾನು ನನ್ನ ಅಧಿಕಾರದ ಅವಧಿಯಲ್ಲಿ ಯಾರ ಬಗ್ಗೆಯೂ ಹಗುರವಾಗಿ ಮಾತನಾಡಿಲ್ಲ, ಯಾರ ಬಳಿಯೂ ದರ್ಪವನ್ನು ತೋರಿಲ್ಲ. ಎಲ್ಲರನ್ನು ಸಹ ಗೌರವದಿಂದ ಕಾಣುವ ಮೂಲಕ ಪಕ್ಷಬೇಧ ಮಾಡದೇ ೧೯೬ ಗ್ರಾ.ಪಂಗಳಿಗೆ ಜನರೇಟರ್ ಕೊಡುವ ಕೆಲಸ ಮಾಡಿದ್ದೇನೆ ಎಂದರು. ಕಳೆದ ಬಾರಿ ನಾನು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿದಾಗ ಎಲ್ಲಾ ಗ್ರಾ.ಪಂ ಸದಸ್ಯರು ಪಕ್ಷಾತೀತವಾಗಿ ಮತಚಲಾವಣೆ ಮಾಡುವ ಮೂಲಕ ನನ್ನ ಗೆಲುವಿಗೆ ಕಾರಣರಾಗಿದ್ದರು. ಆ ಸಂದರ್ಭದಲ್ಲಿ ಪ್ರಾಮಾಣಿಕವಾಗಿ ವಿಧಾನ ಪರಿಷತ್ನಲ್ಲಿ ಗ್ರಾ.ಪಂ ಸಮಸ್ಯೆಗಳ ಜೊತೆಗೆ ಜನಸಮಾನ್ಯಾರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ನ ಹಲವು ಚರ್ಚೆಯಲ್ಲಿ ಭಾಗವಹಿಸಿದ್ದು ಆ ಸಮಸ್ಯೆಗಳನ್ನು ನಿವಾರಣೆ ಮಾಡುವಲ್ಲಿ ಸರ್ಕಾರ ಸ್ಪಂದಿಸಿದೆ ಎಂದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g