May 14, 2024

MALNAD TV

HEART OF COFFEE CITY

ಸಿದ್ದರಾಮಯ್ಯ ಬರುವುದಕ್ಕೆ ಬಿಜೆಪಿಗರು ಭಯಬೀತಗೊಂಡಿದ್ದಾರೆ ; ರೇಖಾಹುಲಿಯಪ್ಪ

1 min read

ಚಿಕ್ಕಮಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಬರುವರೆನ್ನುವ ಸುದ್ದಿ ಕೇಳಿ ಸ್ಥಳೀಯ ಶಾಸಕರು ಸೇರಿದಂತೆ ಬಿಜೆಪಿ ಮುಖಂಡರು ಭಯಭೀತರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ ಉಪಾಧ್ಯಕ್ಷೆ ರೇಖಾಹುಲಿಯಪ್ಪ ಗೌಡ ವ್ಯಂಗ್ಯವಾಡಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಬರುವರೆನ್ನುವ ಸುದ್ದಿ ಕೇಳಿ ಸ್ಥಳೀಯ ಶಾಸಕರು ಸೇರಿದಂತೆ ಬಿಜೆಪಿ ಮುಖಂಡರು ಭಯಭೀತರಾಗಿದ್ದು, ಜಿಲ್ಲೆಗೆ ಅವರ ಕೊಡಗೆ ಏನು ಎಂದು ಪ್ರಶ್ನಿಸುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕರಗಡ ಯೋಜನೆಗೆ 15 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ ನಿಮಾರ್ಣಕ್ಕೆ 30 ಕೋಟಿ ರೂಪಾಯಿ ಅನುದಾನ ನೀಡಿದ್ದರು, ಕಟ್ಟಡ ಆರಂಭಗೊಂಡಾಗ ಸುಮ್ಮನಿದ್ದ ಸ್ಥಳೀಯ ಶಾಸಕರು ಕಟ್ಟಡ ಕಟ್ಟಿ ಆದ ಮೇಲೆ ಜನರಿಗೆ ತೊಂದರೆಯಾಗುತ್ತದೆ ಎಂದು ನೆಪ ಒಡ್ಡಿ ಕೆಲಸ ನಿಲ್ಲಿಸಿದ್ದಾರೆ. ಆ ಕೆಲಸ ನಡೆಯುವಾಗ ನಿಮಗೇನು ಬುದ್ದಿ ಇರಲಿಲ್ಲವೇ ಎಂದು ಪ್ರಶ್ನಿಸಿದ್ರು. ಜನರ ತೆರಿಗೆ ಹಣವನ್ನು ಪೋಲಾಗಲು ಬಿಟ್ಟದ್ದೆ ನಿಮ್ಮ ಸಾಧನೆಯೇ, ಒಳ ಚರಂಡಿ ಯೋಜನೆಗೆ ಹೆಚ್ಚುವರಿಯಾಗಿ 30 ಕೋಟಿ ಹಣ ನೀಡಿದ್ದಾರೆ. ಸಿದ್ದರಾಮಯ್ಯನವರು ಈ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದರೆ ಸಾಕು ಜನರೇ ಅತ್ಯಧಿಕ ಮತಗಳಿಂದ ಗೆಲ್ಲಿಸುತ್ತಾರೆ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!