May 5, 2024

MALNAD TV

HEART OF COFFEE CITY

ಬಿಜೆಪಿ ಶಾಸಕನಿಗೆ ಪೊಲೀಸರಿಂದ ಬಂಧನ ಭೀತಿ…. ?

1 min read

ಚಿಕ್ಕಮಗಳೂರು : ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ. ಕುಮಾರಸ್ವಾಮಿಯವರಿಗೆ ಪೊಲೀಸರಿಂದ ಬಂಧನ ಭೀತಿ ಎದುರಾಗಿದೆ.

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಶಾಸಕ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ತಡೆಯಾಜ್ಞೆ ರಹಿತ ವಾರೆಂಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಜಾರಿ ಮಾಡಿದೆ. ಎಂ.ಪಿ. ಕುಮಾರಸ್ವಾಮಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಚೆಕ್‌ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 30  ದಿನದ ಒಳಗೆ ಹಣ ಮರುಪಾವತಿ ಮಾಡುವಂತೆ ಕೋರ್ಟ್ ಆದೇಶ ನೀಡಿದ್ದರು, ಕ್ಯಾರೆ ಎನ್ನದ BJP ಶಾಸಕ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ. 30  ದಿನದ ಒಳಗೆ ಹಣ ಮರುಪಾವತಿ ಮಾಡದ ಹಿನ್ನೆಲೆ  ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ನಾಲ್ಕು ವರ್ಷ ಜೈಲು ಶಿಕ್ಷೆ ನೀಡಿ ಜನಪ್ರತಿನಿಧಿ ನ್ಯಾಯಾಲಯದಿಂದ ತೀರ್ಪು  ನೀಡಿತ್ತು. 1 ಕೋಟಿ 38 ಲಕ್ಷದ 65 ಸಾವಿರದ  8 ಚೆಕ್ ಬೌನ್ಸ್ ಕೇಸ್ ನಲ್ಲಿ  ಶಾಸಕ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಚಿಕ್ಕಮಗಳೂರು ಮೂಲದ ಹೂವಪ್ಪಗೌಡ ಶಾಸಕ ಕುಮಾರಸ್ವಾಮಿ ವಿರುದ್ಧ 8 ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು. ಸಾಲದ ರೂಪದಲ್ಲಿ ಹಣ ಪಡೆದು ವಂಚನೆ ಮಾಡಿರುವುದಾಗಿ ದೂರು ನೀಡಿದ್ದ ಹೂವಪ್ಪ ಗೌಡ, ಎಂ.ಪಿ ಕುಮಾರಸ್ವಾಮಿ ಹಣ ಹಿಂದಿರುಗಿಸದ ಹಿನ್ನೆಲೆ ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್ ನಲ್ಲಿ ಧಾವೆ ಹೂಡಲಾಗಿತ್ತು. ಮೂರು ವರ್ಷದಿಂದ ನಡೆಯುತ್ತಿದ್ದ ಕೇಸ್ ಗೆ ಈಗ ತೀರ್ಪು ಹೊರಬಂದಿದ್ದು, ನಾಲ್ಕು ವರ್ಷ ಜೈಲು ಶಿಕ್ಷೆ ನೀಡಿ ಜನಪ್ರತಿನಿಧಿ ಕೋರ್ಟ್ನಿಂದ ತೀರ್ಪು ಪ್ರಕಟವಾಗಿದ್ದು, ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ತಡೆಯಾಜ್ಞೆ ರಹಿತ ವಾರೆಂಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಜಾರಿ ಮಾಡಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!