ಸಿ.ಟಿ ರವಿ ಅವಹೇಳನ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಪ್ರೊಟೆಸ್ಟ್
1 min readಚಿಕ್ಕಮಗಳೂರು: ಮಾಜಿ ಶಾಸಕ ಸಿ.ಟಿ ರವಿ ಸೇರಿದಂತೆ ಬಿಜೆಪಿ ಮುಖಂಡರ ಅವಹೇಳನ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ವಿಭಾಗದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಎಸ್ಪಿಯವರಿಗೆ ಮನವಿ ಸಲ್ಲಿಸಿದರು.
ನಾನೂ ಕರಸೇವಕ ನನ್ನನ್ನು ಬಂಧಿಸಿ ಎಂದು ಧರಣಿ ಮಾಡಿದ ಸಿ.ಟಿ ರವಿ ಫೋಟೋ ವಿರೂಪಗೊಳಿಸಿ ನಾನು ಕುಡುಕ ನನ್ನನ್ನು ಬಂಧಿಸಿ ಎಂದು ತಿರುಚಿದ ಪೋಸ್ಟರ್ ಹರಿಬಿಟ್ಟಿರುವ ಕಾಂಗ್ರೆಸಿಗರ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಗೆ ತೆರಳಿ ಎಸ್ಪಿ ವಿಕ್ರಮ್ ಅಮಟೆಯವರಿಗೆ ಮನವಿ ಸಲ್ಲಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಕಲ್ಮರಡಪ್ಪ ನೇತೃತ್ವದಲ್ಲಿ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ತೆರಳಿದ 50ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಾವೇ ಕಚೇರಿ ಹೊರಗೆ ಬಂದು ಮನವಿ ಸ್ವೀಕರಿಸಿದ ಎಸ್ಪಿ ವಿಕ್ರಮ್ ಅಮಟೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಇದೇ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ ಕಲ್ಮರಡಪ್ಪ ತಾಕತ್ತಿದ್ದರೆ ಕಾಂಗ್ರೆಸ್ ಮಾಡಿರುವ ಆರೋಪ ಸಾಬೀತುಪಡಿಸಿ ನಂತರ ಸಿ.ಟಿ ರವಿ ಬಂಧಿಸಿ ಎಂದು ಸವಾಲು ಹಾಕಿದರು. ತಪ್ಪದಲ್ಲಿ ಮರ್ಯಾದೆಯಿಂದ ರಾಜ್ಯದ ಜನರ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು. ನೇರವಾಗಿ ಬಿಜೆಪಿ ಜೊತೆ ಯುದ್ದ ಮಾಡಲಾಗದೆ ಹೆದರಿ ಹಿಂಬಾಗಿಲಿನಿಂದ ಈ ರೀತಿ ಕೃತ್ಯ ಎಸಗುತ್ತಿರುವ ಕಾಂಗ್ರೆಸ್ಸಿಗರಿಗೆ ನಾಚಿಕೆ ಇಲ್ಲವಾಗಿದ್ದು ಎಂದರು. ನೀವು ಮಾಡಿರುವ ಆರೋಪ ಸಾಬೀತು ಮಾಡಿ ಇಲ್ಲವೇ ರಾಜೀನಾಮೆ ನೀಡಿ ಎಂದು ಕಲ್ಮರಡಪ್ಪ ಆಗ್ರಹಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g