ಉಪರಾಷ್ಟ್ರಪತಿ ಅವಹೇಳನ ಖಂಡಿಸಿ ಬಿಜೆಪಿ ಪ್ರತಿಭಟನೆ
1 min readಚಿಕ್ಕಮಗಳೂರು: ಉಪರಾಷ್ಟ್ರಪತಿ ಜಗದೀಶ್ ಧನಕರ್ ರನ್ನು ಅಪಹಾಸ್ಯ ಮಾಡಿದ ಟಿ.ಎಂ.ಸಿ ಸಂಸದ ಹಾಗೂ ಆ ವಿಡಿಯೋ ಶೇರ್ ಮಾಡಿದ ರಾಹುಲ್ ಗಾಂಧಿ ನಡೆಯನ್ನು ಖಂಡಿಸಿ ಬಿಜೆಪಿ ನಗರದಲ್ಲಿ ಪ್ರತಿಭಟನೆ ನಡೆಸಿತು.
ಪಕ್ಷದ ಕಚೇರಿ ಪಾಂಚಜನ್ಯದಿಂದ ಆಜಾದ್ ಪಾರ್ಕ್ ಮೆರವಣಿಗೆ ತೆರಳಿದ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿದರು. ಉಪರಾಷ್ಟಪತಿ ಜಗದೀಶ್ ಧನಕರ್ ರನ್ನು ಅಪಹಾಸ್ಯ ಮಾಡಿದ ಟಿ.ಎಂ.ಸಿ ಸಂಸದ ಹಾಗೂ ಅದನ್ನು ವಿಡಿಯೋ ಮಾಡಿದ ರಾಹುಲ್ ಗಾಂಧಿ ವರ್ತನೆ ಖಂಡಿಸಿ ಪ್ರತಿಭಟನೆ ಮಾಡಿದ ಬಿಜೆಪಿ, ಬಿತ್ತಿ ಪತ್ರ ಹಿಡಿದು ಕಾಂಗ್ರೆಸ್ ಪಕ್ಷದ್ದು ಸಂವಿಧಾನ ವಿರೋಧಿ ನಡೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಟಿ.ಎಂ.ಸಿ ಸಂಸದನನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು. ಪಕ್ಷದ ಮುಖಂಡರಾದ ಬಿ. ರಾಜಪ್ಪ ಕಾಂಗ್ರೆಸ್ ಸಂಸತ್ತಿನಲ್ಲಿ ಕಾನೂನು ವಿರೋಧಿ ನಡೆ ಅನುಸರಿಸುತ್ತಿದೆ ಎಂದು ಆರೋಪಿಸಿದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g