ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
1 min readಚಿಕ್ಕಮಗಳೂರು: ಹಾಲು ಉತ್ಪಾದಕರ ಸಹಾಯಧನವನ್ನು 7 ರೂಪಾಯಿಗೆ ಹೆಚ್ಚಿಸುತ್ತೇವೆ ಎಂದು ಮೌನವಾಗಿರುವ ರಾಜ್ಯ ಸರ್ಕಾರ ವಿರುದ್ಧ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ನೇತೃತ್ವದಲ್ಲಿ ಹಸುಗಳನ್ನು ಕರೆತಂದು ಬಿಜೆಪಿ ಕಾರ್ಯಕರ್ತರು ವಿಭಿನ್ನ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ವಿರುದ್ಧ ನಗರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ದೇವರಾಜ್ ಶೆಟ್ಟಿ ಅವರು, ಸಿದ್ದರಾಮಯ್ಯನವರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ರು.ದೇಶದ ಬೆನ್ನೆಲುಬು ರೈತನಿಗೆ ಕೊಟ್ಟ ಮಾತು ಮರೆತು ಹೋಯಿತ ಸಿದ್ದರಾಮಯ್ಯನವರೇ ಎಂದು ಪ್ರಶ್ನೆ ಮಾಡಿದರು. ಹಾಲು ಉತ್ಪಾದಕರ ಸಹಾಯಧನವನ್ನು 7 ರೂಪಾಯಿ ನೀಡುತ್ತೇನೆ ಎಂದು ಹೇಳಿದ್ದೀರಲ್ಲ, ವರ್ಗಾವಣೆ, ಕಮಿಷನ್ ದಂಧೆಗಳ ಮಧ್ಯ ರೈತರಿಗೆ ಕೊಡಬೇಕಾದ 716 ಕೋಟಿ ಉಳಿಸಿಕೊಂಡಿದ್ದೀರಲ್ಲ ನಾಚಿಕೆಯಾಗುವುದಿಲ್ಲವೇ ಎಂದ ಅವರು ಬಾಕಿ ಉಳಿಸಿಕೊಂಡಿರುವಂತಹ ರೈತರ ಹಣವನ್ನು ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ, ಜಿಲ್ಲಾ ಬಿಜೆಪಿ ವಕ್ತಾರ ಟಿ ರಾಜಶೇಖರ್, ಹಾಲು ಉತ್ಪಾದನೆ ಮಾಡುವ ಉತ್ಪಾದಕರು ಕಷ್ಟದಲ್ಲಿದ್ದು, ಅವರ ಕಷ್ಟದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ನೆರವಿಗೆ ಬರಬೇಕು. ಬಾಕಿ ಉಳಿಸಿಕೊಂಡಿರುವಂತಹ 716 ಕೋಟಿ ಹಣವನ್ನು ಸಂದಾಯ ಮಾಡಬೇಕು ಎಂದ ಅವರು ಕೊಟ್ಟ ಮಾತನ್ನು ರಾಜ್ಯ ಸರ್ಕಾರ ಉಳಿಸಿಕೊಳ್ಳಬೇಕು ಎಂದರು.
ಕೊಟ್ಟ ಮಾತಿಗೆ ತಪ್ಪಿ ನಡೆದರೆ ಮೆಚ್ಚಿನಾ ಪರಮಾತ್ಮನು, ಹಾಲಿನ ದರವನ್ನು ಏಳು ರೂಪಾಯಿ ಹೆಚ್ಚಿಸುತ್ತೇವೆ ಎಂದ ಸಿದ್ದರಾಮಯ್ಯ ಸರ್ಕಾರ ಈಡೇರಿಸುವುದು ಯಾವಾಗ..? ಹಸುಗಳಿಗೆ ಸಿದ್ದು ಶಾಕ್ ಕೊಡುವಂತಹ ಪೋಸ್ಟರ್ ಗಳನ್ನ ಹಿಡಿದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಪ್ರತಿಭಟನಾಕಾರರು ಹಸುಗಳನ್ನು, ಹಾಲಿನ ಕ್ಯಾನ್ ಗಳನ್ನೂ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g