ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸುತ್ತದೆ : ಶಾಸಕ ಸಿ.ಟಿ.ರವಿ
1 min readಚಿಕ್ಕಮಗಳೂರು : ನಮ್ಮ ಮೊದಲ ರಾಜಕೀಯ ವಿರೋಧಿ ಜೆಡಿಎಸ್ ಎಂದು ಅಮಿತ್ ಶಾ ಹೇಳಿದ್ದಾರೆ, ಹೀಗಿರುವಾಗ ಹೊಂದಾಣಿಕೆ ಎಲ್ಲಿಂದ, ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದು ಶಾಸಕ ಸಿ.ಟಿ.ರವಿ ಹೇಳಿದರು.
ಕಳೆದ ಬಾರಿ ಕೂಡ ನಾವು ಯಾವುದೇ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ, ಹೊಂದಾಣಿಕೆಯಾಗಿದ್ರೆ, ಹೆಚ್ಡಿಕೆ ವಿರುದ್ಧ ಯೋಗೀಶ್ವರ್ ಸ್ಪರ್ಧೆ ಮಾಡ್ತಿರಲಿಲ್ಲ, ನನ್ನ ವಿರುದ್ಧ ಜೆಡಿಎಸ್ ಅಭ್ಯರ್ಥಿ 32 ಸಾವಿರ ಮತ ತೆಗೆದುಕೊಂಡರು, ಹೊಂದಾಣಿಕೆ ಮಾಡಿದ್ರೆ ಅಷ್ಟು ಮತಗಳ ತೆಗೆದುಕೊಳ್ತಿದ್ರಾ, ನಮಗೆ ಹೊಂದಾಣಿಕೆ ಅಗತ್ಯವಿಲ್ಲ, ಬಿಜೆಪಿ ಸ್ವತಂತ್ರವಾಗಿಯೇ ಸ್ಪರ್ಧೆ ಮಾಡುತ್ತೆ, ವರುಣಾದಲ್ಲಿ ಸಿದ್ದು ವಿರುದ್ಧ ಬಿಜೆಪಿಯಿಂದ ಯಾರು ಸ್ಪರ್ಧಿ ಅದನ್ನ ಪಾರ್ಲಿಮೆಂಟರಿ ಬೋರ್ಡ್ ಸಿದ್ಧ ಮಾಡುತ್ತೆ, ನಾವು ಯಾರ ವಿರುದ್ಧ ಅಂತಿಲ್ಲ, ನಾವು ಬಿಜೆಪಿ ಪರ ಅಷ್ಟೆ, ನಮ್ಮದು ವೈಚಾರಿಕ ರಾಜಕೀಯ ಪಕ್ಷ, ನಮ್ಮ ಪಕ್ಷದ ವಿಚಾರವನ್ನ ಬೆಳೆಸೋದಷ್ಟೆ ನಮ್ಮ ಗುರಿ, ನಮ್ಮದು ನಕಾರಾತ್ಮಕ ರಾಜಕೀಯ ಅಲ್ಲ, ಸಕಾರಾತ್ಮಕ ರಾಜಕೀಯ, ಪಕ್ಷ ಬೆಳೆಸುವುದು ಎಂದು ಹೇಳಿದರು.
ಮಾಡಾಳು ವಿರೂಪಾಕ್ಷಪ್ಪ ಬಂಧನ ಹಿನ್ನೆಲೆ ಮಾತನಾಡಿದ ಅವರು ಕಾನೂನು ಎಲ್ಲರಿಗೂ ಒಂದೇ, ಕಾನೂನು ಅದರ ಕೆಲಸ ಮಾಡುತ್ತೆ, ತನಿಖೆ ಹಂತದಲ್ಲಿ ನಾವು ಮಧ್ಯಪ್ರವೇಶ ಮಾಡುವ ಪ್ರಶ್ನೆಯೇ ಇಲ್ಲ, ನಾವು ಕಾನೂನಿಗಿಂತ ಮಿಗಿಲು ಅಂತ ಕಾಂಗ್ರೆಸ್ಸಿನ ಒಂದು ಕುಟುಂಬ ಭಾವಿಸುತ್ತೆ, ಸಂವಿಧಾನ, ಕಾನೂನಿಗಿಂತ ಮಿಗಿಲು ಹಾಗೂ ಎತ್ತರದಲ್ಲಿ ಇರುವವರು ಭಾವಿಸುತ್ತೆ, ಕಾನೂನಿನ ದೃಷ್ಠಿಯಲ್ಲಿ ಎಲ್ಲರೂ ಸಮಾನರು, ಕಾನೂನು ಅದರ ಕೆಲಸ ಅದು ಮಾಡುತ್ತೆ ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g