ಹಣ, ಹೆಂಡದ ಹೊಳೆಯಿಂದ ಬಿಜೆಪಿ ಗೆಲುವು_ಎಸ್.ಎಲ್ ಭೋಜೇಗೌಡ
1 min readಚಿಕ್ಕಮಗಳೂರು: ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಜಾತಿವಾರು ಹಲವು ಕೇಂದ್ರ, ರಾಜ್ಯ ನಾಯಕರನ್ನಯ ಕರೆತಂದು ಹಣ, ಹೆಂಡದ ಹೊಳೆ ಹರಿಸಿ ಹರಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು ಬಿಜೆಪಿಗೆ ಇಂತಹ ದುಸ್ಥಿತಿ ಬರಬಾರದಿತ್ತು ಎಂದು ವಿಧಾನ ಪರಿಷತ್ ಸದಸ್ಯೆ ಹಾಗೂ ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಹೇಳಿದರು.
ನಗರದಲ್ಲಿ ನಗರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್ ಅಭ್ಯರ್ಥಿಗಳಿಗೆ ಅಭಿನಂದಿಸಿ ಮಾತನಾಡಿದ ಅವರು, ಬಿಜೆಪಿ ಜಾತಿವಾರು ಕೇಂದ್ರ, ರಾಜ್ಯ ಮುಖಂಡರನ್ನುಕರೆಸಿ ಮತಯಾಚನೆ ಮಾಡಿಸುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬುಡಮೇಲು ಮಾಡುವ ಪರಿಸ್ಥಿತಿ ಉಂಟಾಗಿದ್ದು ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಬಿಜೆಪಿ ಕಳೆದ 10 ವರ್ಷಗಳಿಂದ ನಗರಸಭೆಯಲ್ಲಿ ಆಡಳಿತ ನಡೆಸಿದ್ದು ಈ ಚುನಾವಣೆಯ ಫಲಿತಾಂಶವನ್ನು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗಿದೆ. ಬಿಜೆಪಿ 18 ಸ್ಥಾನದಲ್ಲಿ ಗೆಲುವು ಸಾಧಿಸಿದ್ರೆ ಉಳಿದ 17 ಜನರು ಗೆಲುವು ಸಾಧಿಸಿದ್ದಾರೆ. ಇದನ್ನು ವಿಶ್ಲೇಷಣೆ ಮಾಡಿದಾಗ ಬಿಜೆಪಿಗೆ ಹಿನ್ನೆಡೆಯಾಗಿದ್ದು ಜನರ ತೀರ್ಮಾನವನ್ನು ಒಪ್ಪಿಕೊಂಡು ಸಮರ್ಥ ವಿರೋಧ ಪಕ್ಷವಾಗಿ ಕೆಲಸ ಮಾಡುವುದಾಗಿ ತಿಳಿಸಿದರು.
ಬಿಜೆಪಿ ಹತ್ತು ವರ್ಷ ಆಡಳಿತ ಮಾಡಿ ಅಭಿವೃದ್ಧಿ ಮಂತ್ರವನ್ನು ಘೋಷಣೆ ಮಾಡಿ ಮತದಾರನ್ನು ಒಲಿಸಿಕೊಂಡೊದ್ದರೆ ರಾಜ್ಯ ಹಾಗೂ ಕೇಂದ್ರ ನಾಯಕರನ್ನು ಕರೆತಂದು ಮತಕೇಳುವ ದುಸ್ಥಿತಿ ಬಿಜೆಪಿಗೆ ಬರುತ್ತಿರಲಿಲ್ಲ ಎಂದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g