ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
1 min readಚಿಕ್ಕಮಗಳೂರು: ಭ್ರಷ್ಟಾಚಾರ ಮುಕ್ತವಾದ ಕರ್ನಾಟಕವನ್ನು ನಿರ್ಮಾಣ ಮಾಡುತ್ತೇವೆ ಎಂಬ ಭರವಸೆಯನ್ನು ಜನತೆಗೆ ಕೊಡಬೇಕು ಎಂದು ಬಿಜೆಪಿಯ ಜಿಲ್ಲಾಧ್ಯಕ್ಷ ಕಲ್ಮಂಡಪ್ಪ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಇಂದು ನಗರದ ಆಜಾದ್ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾನಿರತರ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರದ ನೀತಿ ಹಾಗೂ ಹಣದ ಲೂಟಿ ಉದ್ದೇಶವಾಗಿ ಇಂದು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಅವರ ಆಪ್ತರಾದ ಅಂಬಿಕ ಪತಿ ಮತ್ತು ಸಂಪತ್ ಎಂಬ ಗುತ್ತಿಗೆದಾರರ ಮನೆಯಲ್ಲಿ 40 ಸಾವಿರ ಕೋಟಿ ಹಣ ಸಿಕ್ಕಿದ್ದು, ಪಂಚರಾಜ್ಯದ ಚುನಾವಣೆ ಗಾಗಿ ರಾಜ್ಯ ಸರ್ಕಾರವು ಈ ರೀತಿಯಲ್ಲಿ ಹಣದ ಸಂಗ್ರಹ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ರು.
ಇದಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ನೀವು ಮತ್ತು ಮಾಧ್ಯಮಗಳು ನೋಡಿದ್ದೀರಾ..? ಎಂಬ ಪ್ರಶ್ನೆಯನ್ನು ಮಾಡಿದ್ದಾರೆ. ಆದರೆ ಅಂದು ಬೊಮ್ಮಾಯಿ ಸರ್ಕಾರದ ವಿರುದ್ಧ 40% ಸರ್ಕಾರ ಎಂದು ಆರೋಪ ಮಾಡಿದ್ದರು ಆಗ ಆರೋಪ ಮಾಡುವ ಮೊದಲು ನೀವು ಅದನ್ನ ನೋಡಿದ್ದೀರಾ ಎಂದು ಸಿದ್ದರಾಮಯ್ಯ ಅವರಿಗೆ ಮರು ಪ್ರಶ್ನೆ ಮಾಡಿ ಟಾಂಗ್ ನೀಡಿದ್ದಾರೆ.
ರಾಜ್ಯ ಸರ್ಕಾರಕ್ಕೆ ಬೇರೆ ರೀತಿಯಲ್ಲಿ ಹಣವನ್ನ ಲೂಟಿ ಮಾಡಲು ಆಗುತ್ತಿಲ್ಲ ಎಂದು ಕಾಂಟ್ರಾಕ್ಟರ್ ಅಸೋಸಿಯೇಷನ್ ಮುಖಾಂತರ ಬಿಲ್ಲನ್ನು ತಡೆಹಿಡಿದು ಆ ಬಿಲ್ ಗಳಿಗೆ ಕಮಿಷನ್ ನಿಗದಿ ಮಾಡಿ ಹಣದ ಲೂಟಿ ಮಾಡುತ್ತಿದ್ದಾರೆ ಎಂದು ನೇರ ಆರೋಪ ಮಾಡಿದರು.
ಈ ಆರೋಪಗಳು ಸುಳ್ಳು ಎಂದಾದರೆ ತನಿಕೆಯನ್ನ ಸಿಬಿಐಗೆ ಒಪ್ಪಿಸಿ ಯಾರದ್ದು ತಪ್ಪು ಎಂದು ಸಾಬೀತಾಗಲಿ ಎಂದರು.
ನಗರದ ಬಿಜೆಪಿ ಕಚೇರಿ ಪಾಂಚಜನ್ಯದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯ ಪ್ರತಿಭಟನಾನಿರತ ಕಾರ್ಯಕರ್ತರು ಎಟಿಎಂ ಸರ್ಕಾರವನ್ನ ವಜಾ ಗೊಳಿಸುವಂತೆ ಆಗ್ರಹಿಸಿ ನಗರದ ಬೇಲೂರು ರಸ್ತೆನಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರಹಾಕಿದರು.
ಕಾಂಗ್ರೆಸ್ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ ಅವರು ಡಿ.ಕೆ. ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನೆಯಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು. ಇದರಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಯಿತು
ಪ್ರತಿಭಟನೆಯಲ್ಲಿ
ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ, ನಗರ ಮಂಡಲ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯರಾದ ಮಧುಕುಮಾರ್ ರಾಜ್ ಅರಸ್,ಗ್ರಾಮಾಂತರ ಮಂಡಲ ಅಧ್ಯಕ್ಷ
ಈಶ್ವರಳ್ಳಿ ಮಹೇಶ್,ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ಕುರುವಂಗಿ ವೆಂಕಟೇಶ್, ಜಿಲ್ಲಾ ವಕ್ತಾರರು ಹಾಗೂ ನಗರಸಭೆ ಸದಸ್ಯ
ಟಿ ರಾಜಶೇಖರ್,ಬಿಜೆಪಿ , ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ
ಕೋಟೆ ರಂಗನಾಥ್, ನಗರಸಭೆ ಉಪಾಧ್ಯಕ್ಷ ಅಮೃತೇಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g