May 15, 2024

MALNAD TV

HEART OF COFFEE CITY

ನಾಯಿ ಕಡಿತಕ್ಕೆ ಸೂಕ್ತ ಚಿಕಿತ್ಸೆ ಪಡೆಯದ ಬಾಲಕ ರೇಬಿಸ್‍ನಿಂದ ಸಾವು

1 min read

 

ಚಿಕ್ಕಮಗಳೂರು.: ನಾಯಿ ಕಡಿತಕ್ಕೆ ಸೂಕ್ತ ಚಿಕಿತ್ಸೆ ಪಡೆಯದ ಬಾಲಕ ಆರು ತಿಂಗಳ ಬಳಿಕ ರೇಬಿಸ್‍ನಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಆಲ್ದೂರು ಸಮೀಪದ ಕಾರ್ಲಗದ್ದೆ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನ 12 ವರ್ಷದ ಪ್ರಧಾನ್ ಎಂದು ಗುರುತಿಸಲಾಗಿದೆ. ಆಲ್ದೂರು ಸಮೀದ ಕುಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಲ್‍ಗದ್ದೆ ಗ್ರಾಮದ ರಮೇಶ್ ಅವರ ಮಗ ಮನೆ ಮುಂದೆ ಆಟವಾಡುವಾಗ ಬೀದಿ ನಾಯಿ ಬಾಲಕನ ಮೇಲೆ ದಾಳಿ ಮಾಡಿತ್ತು. ಬೀದಿ ನಾಯಿ ದಾಳಿ ಮಾಡಿದಾಗ ಮನೆಯವರು ಸೂಕ್ತ ಚಿಕಿತ್ಸೆ ಕೊಡಿಸಬೇಕಿತ್ತು. ಆದರೆ, ನಾಯಿ ದಾಳಿ ಮಾಡಿದರೂ ಸೂಕ್ತ ಚಿಕಿತ್ಸೆ ಕೊಡಿಸದ ಕಾರಣ ಬಾಲಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

ಕಳೆದೊಂದು ವಾರದ ಹಿಂದೆ ಬಾಲಕ ಪ್ರಧಾನ್‍ಗೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಆತನನ್ನ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಾಸನದ ಆಸ್ಪತ್ರೆಯಲ್ಲಿ ನಾಯಿ ಕಡಿತದಿಂದ ರೇಬಿಸ್ ಕಾಯಿಲೆಗೆ ತುತ್ತಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವಿಗೀಡಾಗಿದ್ದಾನೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!