ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಅವಕಾಶಕ್ಕೆ ಆಗ್ರಹ
1 min read
ಚಿಕ್ಕಮಗಳೂರು: ಈ ಬಾರಿಯ ಗಣರಾಜ್ಯೋತ್ಸವ ಪೆರೇಡ್ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಜಿಲ್ಲಾ ಶ್ರೀ ನಾರಾಯಣ ಗುರು ಸಮಿತಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಗಣರಾಜ್ಯೋತ್ಸವದ ಪೆರೇಡ್ಗಾಗಿ ಕೇರಳದಿಂದ ಕಳಿಸಿದ್ದ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದು ಖಂಡನೀಯ ಎಂದು ಸಮಿತಿಯ ಜಿಲ್ಲಾಧ್ಯಕ್ಷ ದಾಸರಹಳ್ಳಿ ಎಂ.ಕೃಷ್ಣಪ್ಪ ಹೇಳಿದ್ದಾರೆ.
ಅಸ್ಪøಶ್ಯತೆ, ಅಸಮಾನತೆ, ದೌರ್ಜನ್ಯ, ಶೋಷಣೆ ಮತ್ತು ಜಾತೀಯತೆ ವಿರುದ್ಧ ಹೋರಾಟ ನಡೆಸಿ ಸಮಾನತೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಕೆಳವರ್ಗ ಮತ್ತು ಹಿಂದುಳಿದ ವರ್ಗಗಳ ಜನರ ಸ್ವಾಭಿಮಾನ ಹಾಗೂ ಆತ್ಮಾಭಿಮಾನದ ಸಂಕೇತವಾಗಿದ್ದಾರೆ ಅವರಿಂದಾಗಿ ಕೇಳವರ್ಗದ ಜನ ಇಂದು ಮರ್ಯಾದೆಯಿಂದ ತಲೆ ಎತ್ತಿ ಬದುಕುವಂತಾಗಿದೆ ಎಂದು ತಿಳಿಸಿದ್ದಾರೆ.
ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕರಿಸುವ ಮೂಲಕ ಕೇಂದ್ರ ಸರ್ಕಾರ ಕೆಳವರ್ಗಗಳ ಜನರ ಆತ್ಮಾಭಿಮಾನಕ್ಕೆ ಕೊಡಲಿ ಪೆಟ್ಟು ನೀಡಿದೆ ಎಂದು ಆರೋಪಿಸಿದ್ದಾರೆ.
ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂಬ ತತ್ವವನ್ನು ಜಗತ್ತಿಗೆ ಸಾರಿದ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಈ ಬಾರಿಯ ಗಣರಾಜ್ಯೋತ್ಸವ ಪೆರೇಡ್ನಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರ ಅವಕಾಶ ನೀಡಬೇಕು ಎಂದು ಆಗ್ರಹಿಸಿರುವ ಕೃಷ್ಣಪ್ಪ ಇಲ್ಲದಿದ್ದಲ್ಲಿ ಹೋರಾಟ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g