December 10, 2025

MALNAD TV

HEART OF COFFEE CITY

ಕಾಂಗ್ರೆಸ್ ಗ್ರಾಪಂ ಸದಸ್ಯನ ಬರ್ಬರ ಹ*ತ್ಯೆ

1 min read

 

 

 

 

 

 

 

 

 

 

 

ಚಿಕ್ಕಮಗಳೂರು: ಮಾರಕಾಸ್ತ್ರಗಳಿಂದ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಗಣೇಶ್ (38) ಅವರನ್ನು ಯುವಕರ ಗುಂಪೊಂದು ಮಚ್ಚಿನಿಂದ ಹೊಡೆದು ಕೊಂದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಸಖರಾಯಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಗಣೇಶ್ ಕೊಲೆಯಾಗಿದ್ದಾರೆ. ಇದಕ್ಕೂ ಮೊದಲು ಸಖರಾಯಪಟ್ಟಣದ ಬಾರ್ ಬಳಿ ಎರಡೂ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಆ ಗಲಾಟೆಯ ಅರ್ಧ ಗಂಟೆಯಲ್ಲೇ ಮಠದ ಬಳಿಯಲ್ಲಿ ಮತ್ತೊಮ್ಮೆ ಸಂಘರ್ಷ ತೀವ್ರಗೊಂಡು ಹತ್ಯೆಯಾಗಿ ಮಾರ್ಪಟ್ಟಿದೆ. ಬಡಿದಾಟದಲ್ಲಿ ಎದುರಾಳಿ ಗುಂಪಿನ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!