April 29, 2024

MALNAD TV

HEART OF COFFEE CITY

ಮೋದಿ ಪರ ದೇಶಾದ್ಯಂತ ಬುಲೆಟ್ ರಾಣಿ ಬೈಕ್ ಸಂಚಾರ : ಇಂದು ನಗರಕ್ಕೆ

1 min read

ಲೋಕಸಭಾ ಚುನಾವಣೆ ಕಾವು ನಿಧಾನಕ್ಕೆ ಏರುತ್ತಿದ್ದಂತೆ ಪ್ರಚಾರದ ಭರಾಟೆ ಸಹಾ ವೇಗ ಪಡೆಯುತ್ತಿದೆ. ಪ್ರಧಾನಿ ಮೋದಿ ಪರ ದೇಶಾದ್ಯಂತ ಬೈಕ್ ಸಂಚಾರ ಆರಂಭಿಸಿರುವ ತಮಿಳುನಾಡಿನ ಬುಲೆಟ್ ರಾಣಿ ರಾಜಲಕ್ಷ್ಮಿ ಇಂದು ಕಾಫಿನಾಡು ಚಿಕ್ಕಮಗಳೂರಿಗೆ ಆಗಮಿಸಿದ್ದು ಈಗಾಗಲೇ 4200 km ಕ್ರಮಿಸಿದ್ದಾರೆ.

ದೇಶಾದ್ಯಂತ 15 ರಾಜ್ಯಗಳ ಸಂಚಾರ 21 ಸಾವಿರ ಕಿಲೋಮೀಟರ್ ಕ್ರಮಿಸುವ ಗುರಿಯೊಂದಿಗೆ ತಮಿಳುನಾಡಿನ ಮಧುರೈನಿಂದ ಹೊರಟಿರುವ ಬೈಕ್ ರ್ಯಾಲಿ ಬುಲೆಟ್ ರಾಣಿ ರಾಜಲಕ್ಷ್ಮಿ ನೇತೃತ್ವದಲ್ಲಿ ಸಂಚರಿಸುತ್ತಿದೆ. ಇಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಿ ದ್ದರು, ಪ್ರಧಾನಿ ನರೇಂದ್ರ ಮೋದಿ ಪರ ಪ್ರಚಾರ ಕೈಗೊಂಡಿರುವ 21 ಜನರ ತಂಡ ಮತ್ತೊಮ್ಮೆ ಮೋದಿ ಆಯ್ಕೆಗೆ ಸಹಕರಿಸಬೇಕು ಮಹಿಳೆಯರ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಬುಲೆಟ್ ರಾಣಿ ರಾಜಲಕ್ಷ್ಮಿ ನಂದಾ ತಿಳಿಸಿದರು. ಫೆಬ್ರವರಿ 18 ರಂದು ತಮಿಳುನಾಡಿನ ಮಧುರೈನಿಂದ ಆರಂಭಗೊಂಡಿರುವ ರ್ಯಾಲಿ ಆಂದ್ರಪ್ರದೇಶ ತೆಲಂಗಾಣ ಕಡೆಯಿಂದ ಕರ್ನಾಟಕ ಪ್ರವೇಶಿಸಿದ್ದು ಈಗಾಗಲೇ 4200 ಕಿಲೋಮೀಟರ್ ಕ್ರಮಿಸಿದ್ದು ಬೆಳಗಾವಿ ಮೂಲಕ ಮಹಾರಾಷ್ಟ್ರ ಗೋವಾ ಮಧ್ಯಪ್ರದೇಶ ಉತ್ತರಪ್ರದೇಶ ಜಾರ್ಖಂಡ್ ದೆಹಲಿ ಮೂಲಕ ಸಂಚರಿಸಿ 21 ಸಾವಿರ ಕಿಲೋ ಮೀಟರ್ ಕ್ರಮಿಸಿ ಏಪ್ರಿಲ್ 18 ಕ್ಕೆ ಕೊನೆಗೊಳ್ಳಲಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!