ಬೆಂಗಳೂರಿಗೆ ಹೋಗಿದ್ದ ಶಿಕ್ಷಕರ ಮನೆಯಲ್ಲಿ ಕಳ್ಳತನ, ಹಣ-ಚಿನ್ನ ದೋಚಿ ಪರಾರಿ,
1 min readಚಿಕ್ಕಮಗಳೂರು: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರ ಣವನ್ನು ದೋಚಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ವಿಜಯನಗರ ಬಡಾವಣೆಯಲ್ಲಿರುವ ಶರತ್ ಎಂಬುವವರ ಮನೆಗೆ ನುಗ್ಗಿರುವ ಕಳ್ಳರು ಮನೆ ಬಾಗಿಲಿನ ಬೀಗ ಒಡೆದು 329ಗ್ರಾಂ ಚಿನ್ನ, ದೋಚಿ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.
ಮನೆಯವರು ಕಳೆದ ಮೂರು ದಿನಗಳಿಂದ ಬೆಂಗಳೂರಿಗೆ ತೆರಳಿದ್ದ ವೇಳೆ ಈ ಕೃತ್ಯ ನಡೆ ದಿದ್ದು ಭಾನುವಾರ ರಾತ್ರಿ ಮನೆಗೆ ಆಗಮಿಸಿದಾಗ ಕಳುವಾದ ಬಗ್ಗೆ ಮಾಹಿತಿ ದೊರೆತು ದೂರು ನೀಡಿದ್ದಾರೆ. ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು ಶ್ವಾನದಳ ಮತ್ತು ಬೆರಳಚ್ಚು ತಜ್ಞರು ತೆರಳಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬoಧ ನಗರಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g