ಬಸ್-ಬೈಕ್ ಡಿಕ್ಕಿ, ಓರ್ವ ಯುವಕ ಸ್ಥಳದಲ್ಲೇ ಸಾವು
1 min readಚಿಕ್ಕಮಗಳೂರು.: ಸರಕಾರಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ನಡೆದಿದೆ. ಮೃತನನ್ನ ಮೂಡಿಗೆರೆ ತಾಲೂಕಿನ ದಾಸರಹಳ್ಳಿ ಗ್ರಾಮದ 21 ವರ್ಷದ ರಾಜೇಶ್ ಎಂದು ಗುರುತಿಸಲಾಗಿದೆ. ಬೈಕಿನ ಹಿಂದೆ ಕೂತಿದ್ದ ಅಶೋಕ್ ಎಂಬ ಯುವಕನಿಗೂ ಗಂಭೀರ ಗಾಯವಾಗಿದ್ದು ಆತನನ್ನ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಬಸ್ಗೆ ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಕೆಳಗೆ ಬೀಳುತ್ತಿದ್ದಂತೆ ಬಸ್ಸಿನ ಚಕ್ರ ಬೈಕ್ ಓಡಿಸುತ್ತಿದ್ದ ಯುವಕನ ತಲೆ ಮೇಲೆ ಹತ್ತಿದ ಪರಿಣಾಮ ಮೃತ ರಾಜೇಶ್ ತಲೆ ಛಿದ್ರವಾಗಿದೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ಮತ್ತೊಂದು ಅಪಘಾತದ ಸಂಭವಿಸಿದ್ದು ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾಗಿದ್ದಾರೆ. ಕೊಟ್ಟಿಗೆಹಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಕ್ಯಾಂಟರ್ ಹಾಗೂ ಪಿಕ್ಅಪ್ ಮುಖಾಮುಖಿ ಡಿಕ್ಕಿಯಾಗಿವೆ. ಪಿಕ್ಅಪ್ನಲ್ಲಿದ್ದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆತನನ್ನೂ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g