May 20, 2024

MALNAD TV

HEART OF COFFEE CITY

ವಿದ್ಯಾನಿಕೇತನ ಶಾಲೆ ವತಿಯಿಂದ: ಕೆ.ಸಿ.ರಘು ಸ್ಮರಣಾರ್ಥ ವಿವಿಧ ಸ್ಪರ್ಧೆ

1 min read

ಚಿಕ್ಕಮಗಳೂರು: ಕೆ.ಸಿ. ರಘು ಸ್ಮರಣಾರ್ಥ ರಾಜ್ಯ ಮಟ್ಟದ ಅಂತರ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕುವೆಂಪು ವಿದ್ಯಾನಿಕೇತನ ಶಾಲೆಯ ಸಂಸ್ಥಾಪಕ ಹಾಗೂ ಕಾರ್ಯದರ್ಶಿ ಕೆ.ಸಿ ಶಂಕರ್ ಹೇಳಿದರು.
ಇದೇ ಡಿಸೆಂಬರ್ 2 ರಂದು ಕುವೆಂಪು ವಿದ್ಯಾನಿಕೇತನ ಶಾಲೆ ವತಿಯಿಂದ ಖ್ಯಾತ ಆಹಾರ ವಿಜ್ಞಾನಿ, ತಜ್ಞ, ಚಿಂತಕ ಕೆ.ಸಿ.ರಘು ಸ್ಮರಣಾರ್ಥ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ವಿದ್ಯಾನಿಕೇತನ ಶಾಲೆಯ ಸಂಸ್ಥಾಪಕ, ಸಂಸ್ಥೆಯ ಕಾರ್ಯದರ್ಶಿ ಕೆ.ಸಿ ಶಂಕರ್ ತಿಳಿಸಿದರು. ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಮಾನ್ಯ ಪ್ರಶ್ನಾವಳಿ, ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಭಾರತ ಹೆಸರಿನ ಮೇಲೆ ಚರ್ಚಾ ಸ್ಪರ್ಧೆ ಸಹಾ ನಡೆಯಲಿದೆ ಎಂದು ಕೆ.ಸಿ ಶಂಕರ್ ಮಾಹಿತಿ ನೀಡಿದರು. ಈಗಾಗಲೇ 100ಕ್ಕೂ ಹೆಚ್ಚು ಶಾಲೆಗಳು ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸುತ್ತಿದ್ದು, ವಸತಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದಾಗಿ ವಿದ್ಯಾನಿಕೇತನ ಶಾಲೆಯ ಪ್ರಾಂಶುಪಾಲ ರಾಘವೇಂದ್ರ ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!