May 15, 2024

MALNAD TV

HEART OF COFFEE CITY

ಶಾರದಾಂಬೆಯ ಸುಂದರ ನೋಟ ಕ್ಯಾಮರಾ ಕಣ್ಣಲ್ಲಿ ಸೆರೆ :

1 min read

ಗುಡುಗು-ಮಿಂಚಿನ ಸಮ್ಮಿಲನದಿಂದ ಹಿಂದೆಂದೂ ಕಾಣದ ರೀತಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಭೆ ದೇಗುಲದ ಸುಂದರ ನೋಟ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ನಿನ್ನೆ ಮಳೆ ಆರಂಭಕ್ಕೂ ಮುನ್ನ ಆರಂಭವಾದ ಗುಡುಗು-ಸಿಡಿಲಿನ ಮಧ್ಯೆ ಶೃಂಗೇರಿ ಶಾರದಾಂಭೆ ದೇಗುಲದ ದೃಶ್ಯಕಾವ್ಯ ನೊಡುಗರ ಮನಸೊರೆಗೊಂಡಿದ್ದು, ಶಾರದಾಂಭೆ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರು ಈ ಅಪರೂಪದ ಚಿತ್ರವನ್ನ ಸೆರೆ ಹಿಡಿದಿದ್ದಾರೆ.

ಶಾರದಾಂಭೆ ದೇಗುಲದ ಆಕಾಶದ ಮೇಲ್ಭಾಗದಲ್ಲಿ ಮಿಂಚಿನಿಂದ ಕೃತಕವಾಗಿ ಅಲಂಕರಿಸಿದಂತಿದೆ. ಪ್ರಕೃತಿಯೇ ಮಿಂಚಿನಿಂದ ಶಾರದಾಂಭೆ ದೇಗುಲಕ್ಕೆ ಲೈಟಿಂಗ್ ಸೌಲಭ್ಯ ಕಲ್ಪಿಸಿದಂತೆ ಭಾಸವಾಗಿದೆ. ದೇಗುಲದ ಮೇಲ್ಭಾಗದಲ್ಲೇ ಮಿಂಚು ಸಂಭವಿಸಿದ್ದರಿಂದ ಕಲ್ಲುಗಳಿಂದಲೇ ನಿರ್ಮಾಣಗೊಂಡಿರೋ ಪುರಾತನ ಶಾರದಾಂಬೆ ದೇಗುಲದ ಸೌಂದರ್ಯ ಕೂಡ ಮತ್ತಷ್ಟು ಇಮ್ಮಡಿಗೊಂಡಿದೆ. ಇದನ್ನ ಕಂಡ ಭಕ್ತರು ಸಂತಸಪಟ್ಟಿದ್ದಾರೆ. ಮಲೆನಾಡಲ್ಲಿ ಎರಡು ದಿನಗಳನ್ನು ಮಳೆ ಆರಂಭವಾಗಿದ್ದು ಮಳೆ ಆರಂಭವಾದ ಹಿನ್ನೆಲೆಯಲ್ಲಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ..

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!