ಜಾತಿ ನಿಂದನೆ ಆರೋಪ: ಎಸಿಎಫ್ ರತ್ನಪ್ರಭಾ ವಜಾಕ್ಕೆ ಒತ್ತಾಯ
1 min readಚಿಕ್ಕಮಗಳೂರು: ಅರಣ್ಯ ಇಲಾಖೆಯ ಡಿ ದರ್ಜೆ ನೌಕರರೊಬ್ಬರಿಗೆ ಜಾತಿನಿಂದನೆ ಮಾಡಿರುವ ಲಕ್ಕವಳ್ಳಿ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯನ್ನು ಕೂಡಲೇ ಬಂಧಿಸಿ, ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳು ಬುಧವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದವು.
ಹನುಮಂತಪ್ಪ ವೃತ್ತದಿಂದ ಮೆರವಣಿಗೆ ಹೊರಟ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರುಗಳು, ಮುಖ್ಯರಸ್ತೆಯಲ್ಲಿ ತೆರಳಿ, ಆಜಾದ್ವೃತ್ತದಲ್ಲಿ ಧರಣಿ ನಡೆಸಿದರು. ಸರ್ಕಾರ ಮತ್ತು ಸಹಾಯಕ ಅರಣ್ಯಾಧಿಕಾರಿ ವಿರುದ್ಧ ಘೋಷಣೆ ಕೂಗಿದರು.ತಕ್ಷಣ ಸೇವೆಯಿಂದ ವಜಾಗೊಳಿಸದಿದ್ದರೆ, ರಾಜ್ಯಾದ್ಯಂತ ಚಳವಳಿ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು.
ಪ್ರತಿಭಟನಾನಿರತನ್ನುದ್ದೇಶಿಸಿ ಮಾತನಾಡಿದ ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ದಲಿತರ ಸ್ವಾಭಿಮಾನಕ್ಕೆ ಧಕ್ಕೆಯಾಗುವಂತೆ ಜಾತಿನಿಂದನೆಯೊಂದಿಗೆ ಅವಹೇಳನಾ ಮಾಡಲಾಗಿದೆ. ಆ ಅಧಿಕಾರಿಗೆ ಏನು ಶಿಕ್ಷೆಕೊಟ್ಟರೂ ಕಡಿಮೆಯೇ.ಜಾತಿನಿಂದನೆ ಪ್ರಕರಣ ದಾಖಲಾಗಿರುವುದರಿಂದ ಪೊಲೀಸರು ಕೂಡಲೇ ಅಧಿಕಾರಿಯನ್ನು ಬಂಧಿಸಬೇಕೆಂದು ಆಗ್ರಹಿಸಿದರು.
ಅಧಿಕಾರಿಯನ್ನು ಬಂಧಿಸುವ ತನಕ ಹೋರಾಟ ಮುಂದುವರೆಲಿದ್ದು, ಜಾತಿನಿಂದನೆ ಮಾಡಿರುವ ಅಧಿಕಾರಿ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g