ಕನ್ನಡ ಪರ ಸಂಘಟನೆಗಳಿಂದ ಮುಂದುವರೆದ ಕಾವೇರಿ ಕೂಗು
1 min readಚಿಕ್ಕಮಗಳೂರು : ಕರ್ನಾಟಕ ರಾಜ್ಯ ಸರ್ಕಾರವು ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಕರ್ನಾಟಕ ಬಂದ್ ನಡೆಸಿದರು, ಜನರ ಕೂಗಿಗೆ ಕ್ಯಾರೆ ಎನ್ನದೆ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ರಾಜೇಗೌಡ ನೇತೃತ್ವದಲ್ಲಿ ಕನ್ನಡ ಸೇನೆ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟಿಸಿದ ಕನ್ನಡ ಸೇನೆ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕನ್ನಡ ಸೇನೆ ಕಾರ್ಯಕರ್ತರು ರಸ್ತೆ ತಡೆ ಮಾಡಿದುದರಿಂದ ಕೆಲ ಕಾಲ ವಾಹನ ಸವಾರರು ಪರದಾಡುವಂತಾಯಿತು.
ಈ ವೇಳೆ ಮಾತನಾಡಿದ ಕನ್ನಡ ಸೇನೆ ಜಿಲ್ಲಾಧ್ಯಕ್ಷ ರಾಜೇಗೌಡ ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ ಬರಗಾಲದ ವಾತಾವರಣ ತಾಂಡವವಾಡುತ್ತಿದ್ದು, ಇದರಿಂದ ಮಂಡ್ಯ, ಮೈಸೂರು, ಬೆಂಗಳೂರಿನ ಜನರಿಗೆ ಕುಡಿಯಲು ನೀರಿಲ್ಲ, ರೈತರಿಗೆ ಬೆಳೆ ಬೆಳೆಯಲು ನೀರಿಲ್ಲ. ರಾಜ್ಯ ಸರ್ಕಾರದ ಕಣ್ಣು ತೆರೆಸಲು ರಾಜ್ಯ ಬಂದ್ ಸೇರಿದಂತೆ ಹಲವು ವಿಧದ ಹೋರಾಟಗಳನ್ನು ಮಾಡಿದರು, ರಾಜ್ಯ ಸರ್ಕಾರ ದಪ್ಪ ಚರ್ಮದ ಸರ್ಕಾರವಾಗಿದೆ. ಈಗ ನಾವು ಸಾಂಕೇತಿಕ ರಸ್ತೆ ತಡೆ ನಡೆಸಿದ್ದು, ಹೀಗೆ ಮುಂದುವರೆದರೆ ನಾವು ಪ್ರಾಣ ಬಿಡುತ್ತೇವೆ ಹೊರತು ನೀರು ಬಿಡುವುದಿಲ್ಲ, ಮುಂದಿನ ದಿನಗಳಲ್ಲಿ ರಾಜ್ಯಾಧ್ಯಕ್ಷರ ಆಣತಿಯಂತೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g