ದತ್ತಜಯಂತಿ ನಾಡ ಉತ್ಸವವಾಗಿ ಆಚರಣೆ: ಭಜರಂಗದಳ ಮುಖಂಡ ಕೆ.ಆರ್ ಸುನೀಲ್
1 min readಚಿಕ್ಕಮಗಳೂರು: ಈ ಬಾರಿಯ ದತ್ತಜಯಂತಿಯನ್ನು ನಾಡ ಉತ್ಸವವಾಗಿ ಆಚರಿಸಲಾಗುವುದು ಎಂದು ಭಜರಂಗದಳ ದಕ್ಷಿಣ ಕರ್ನಾಟಕ ಪ್ರಾಂತ ಸಂಯೋಜಕ ಕೆ.ಆರ್ ಸುನೀಲ್ ಹೇಳಿದ್ದಾರೆ.
ಇದೇ ಡಿಸೆಂಬರ್ 17 ರಿಂದ 26ರ ವರೆಗೆ ವಿಶ್ವ ಹಿಂದು ಪರಿಷತ್ ಭಜರಂಗದಳ ಪ್ರಾಯೋಜಿತ ದತ್ತಜಯಂತಿ ಮಹೊತ್ಸವ ಅದ್ದೂರಿಯಾಗಿ ನಡೆಯಲಿದೆ ಎಂದು ವಿಶ್ವ ಹಿಂದು ಪರಿಷತ್ ಭಜರಂಗದಳ ಮುಖಂಡರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 17 ನೇ ತಾರೀಖು ರಾಜ್ಯದ ವಿವಿದೆಡೆ ದತ್ತ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಮಾಲಾಧಾರಣೆ ಮಾಡಲಿದ್ದಾರೆ. ಡಿಸೆಂಬರ್ 24 ರಂದು ದತ್ತಪೀಠದಲ್ಲಿ ಅನುಸೂಯ ದೇವಿ ಪೂಜೆ ನಡೆಯಲಿದ್ದು ನಗರದ ಬೋಳರಾಮೇಶ್ವರ ದೇವಾಲಯದಿಂದ ಕಾಮಧೇನು ಗಣಪತಿ ದೇಗುಲದವರೆಗೆ ಸಂಕೀರ್ತನಾ ಯಾತ್ರೆ ನಡೆಯಲಿದೆ. 25 ರಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಲಿದ್ದು ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದಾರೆ ಎಂದು ಭಜರಂಗದಳ ದಕ್ಷಿಣ ಕರ್ನಾಟಕ ಪ್ರಾಂತ ಸಂಯೋಜಕ ಕೆ.ಆರ್ ಸುನಿಲ್ ತಿಳಿಸಿದರು. ಕೊನೆ ದಿನ ಡಿಸೆಂಬರ್ 26 ರಂದು ದತ್ತಜಯಂತಿ ಪ್ರಯುಕ್ತ ದತ್ತಪೀಠದಲ್ಲಿ ಪೂಜೆ ಹೋಮ ಹವನ ನಡೆಯಲಿದ್ದು ರಾಜ್ಯದ ಮೂಲೆ ಮೂಲೆಗಳಿಂದ ಬರುವ ದತ್ತಭಕ್ತರು ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ ಎಂದು ಅವರು ತಿಳಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g