April 30, 2024

MALNAD TV

HEART OF COFFEE CITY

ರೈತರ ವಿರುದ್ದ ಕೇಂದ್ರ ಸರ್ಕಾರದ ನೀತಿ ಖಂಡನೀಯ : ಹೆಚ್.ಹೆಚ್ ದೇವರಾಜ್

1 min read

ರಾಷ್ಟ್ರದಲ್ಲಿ ನಿನ್ನೆ ರೈತರು ಚಳುವಳಿ ನಡೆಸುತ್ತಿದ್ದ ಸಂದರ್ಭಲ್ಲಿ ಕೇಂದ್ರ ಸರ್ಕಾರ ದಮನಕಾರಿ ನೀತಿಯನ್ನು ಅನುಸರಿಸುತ್ತಿದ್ದು ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಹೆಚ್.ಹೆಚ್ ದೇವರಾಜ್ ಹೇಳಿದರು. ಅವರು ಸುದ್ದಿಗೋಷ್ಠಿಯ ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ, ಚಳುವಳಿ ನಡೆಸುತ್ತಿದ್ದ ರೈತರ ಮೇಲೆ ಗುಂಡಿನ ಸುರಿಮಳೆ ಸುರಿಸಿದ ಕೃಷಿ ಸಚಿವರು ಹಾಗೂ ಪ್ರಧಾನ ಮಂತ್ರಿಗಳು ರಾಜಿನಾಮೆ ನೀಡಬೇಕು ಎಂದು ಒತ್ತಾಯಸಿದರು. ನಿನ್ನೆ ಶೃಂಗೇರಿಯಲ್ಲಿ ಕಂದಾಯ ಸಚಿವರ ಆಪ್ತ ಕಾರ್ಯದರ್ಶಿಗಳು ಅಲ್ಲಿನ ಉಪ ನೋಂದಣಾಧಿಕಾರಿಗಳಿಗೆ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು , ಇವರ ವಿರುದ್ದ  ಉಪ ನೋಂದಣಾಧಿಕಾರಿಗಳು ದೂರು ನೀಡಿದ್ದು ಇವರನ್ನು ಅಬಿನಂದಿಸುತ್ತೇವೆ. ಅವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದರು.  ಇದೇ ವೇಳೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಕಾಫಿ ಮಂಡಳಿಯ ಶಾಖೆಗಳನ್ನು ಮುಚ್ಚಿಸುವ ನಿರ್ಣಾಯ ತೆಗೆದುಕೋಂಡಿದ್ದು, ಇದನ್ನು ವಿರೋಧಿಸಿ ಪೆಬ್ರವರಿ 1 ರಂದು ಕಾಫಿ ಮಂಡಳಿಯ ಕೇಂದ್ರ ಕಛೇರಿಗೆ ಮುತ್ತಿಗೆ ಹಾಕುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!