ಸಿರಿ ಧಾನ್ಯಗಳು ಜೀವನಕ್ಕೆ ಆಧಾರ: ಮಂಗಳ ತಮ್ಮಯ್ಯ
1 min readಚಿಕ್ಕಮಗಳೂರು: ಸಿರಿ ಧಾನ್ಯಗಳು ಜೀವನಕ್ಕೆ ಆಧಾರವಾಗಿದ್ದು ಹೆಚ್ಚಾಗಿ ಇವುಗಳನ್ನು ಬಳಸಿಕೊಂಡು ಆರೋಗ್ಯವಂತರಾಗೋಣ ಎಂದು ಮಂಗಳ ತಮ್ಮಯ್ಯ ತಿಳಿಸಿದ್ರು.
ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಸಿರಿಧಾನ್ಯಗಳ ಪಾಕ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಜಂಟಿ ಕೃಷಿ ನಿರ್ದೇಶಕಿ ಸುಜಾತ ಮಾತನಾಡಿ, ಸಿರಿ ಧಾನ್ಯಗಳ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಹಾಗೂ ಅರಿವು ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ 2023 ಎಂದು ಘೋಷಣೆ ಮಾಡಲಾಗಿತ್ತು ಈ ಹಿನ್ನೆಲೆಯಲ್ಲಿ ಇಂದು ಸಿರಿಧಾನ್ಯಗಳ ಪಾಕ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ ಅಷ್ಟೇ ಅಲ್ಲದೆ ಇದೇ ತಿಂಗಳಲ್ಲಿ ಸಿರಿ ಧಾನ್ಯಗಳ ಮೇಳ, ಸಿರಿಧಾನ್ಯ ನಡಿಗೆ ಎಂಬ ಕಾರ್ಯಕ್ರಮವನ್ನು ಸಹ ಆಯೋಜನೆ ಮಾಡಲಾಗಿದ್ದು ಸಾರ್ವಜನಿಕರು ಭಾಗಿಯಾಗಬೇಕೆಂದು ಮನವಿ ಮಾಡಿದ್ರು. ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕಿ ವಿಜಯಲಕ್ಷ್ಮಿ, ಸೇರಿದಂತೆ ವಿವಿಧ ತಾಲೂಕುಗಳ ಮಹಿಳೆಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g