ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರ ಪೂರ್ಣ ಅವಧಿಗೆ ಒತ್ತಾಯಿಸಿ ಪ್ರತಿಭಟನೆ
1 min readಚಿಕ್ಕಮಗಳೂರು.ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಪೂರ್ಣ ಅವಧಿಗೆ ಮುಂದುವರೆಸುವಂತೆ ಒತ್ತಾಯಿಸಿ ಅಖಿಲ ಭಾರತಿಯ ವೀರಶೈವ ಮಹಾಸಭಾ ಹಾಗೂ ತಾಲೂಕು ವೀರಶೈವ ಮಹಾಸಭಾದಿಂದ ನಗರದ ಅಜಾದ್ ಪಾರ್ಕ್ ಬಳಿ ಪ್ರತಿಭಟನೆ ನಡೆಸಿದರು.
ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಬಹಳ ಚರ್ಚಗೆ ಸಿಲುಕಿದೆ. ರಾಜ್ಯದ ಮುಖ್ಯಮಂತ್ರಿಗಳು, ವೀರಶೈವ ಲಿಂಗಾಯತ ಸಮಾಜದ ಮುಖಂಡರು ಹಾಗೂ ಕಾಯಕ ಯೋಗಿ ಶ್ರೀಬಿ.ಎಸ್.ಯಡಿಯೂರಪ್ಪ ನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಿ ಗೊಳಿಸಲು ಬಿಜೆಪಿ ಮುಖಂಡರು ಹುನ್ನಾರ ನಡೆಸಿದಂತೆ ಕಾಣುತ್ತಿದೆ. ಈ ಸಂಬಂಧ ಈಗಾಗಲೇ ರಾಜ್ಯಾದ್ಯಂತ ಮಠಾಧೀಶರು ಸೇರಿದಂತೆ, ಅವರ ಅಭಿಮಾನಿಗಳು ವಿಶೇಷವಾಗಿ ವೀರಶೈವ ಲಿಂಗಾಯತ ಸಮಾಜದ ಪ್ರಮುಖರು ವಿರೋಧ ಪಕ್ಷದ ಮುಖಂಡರುಗಳು ಈ ಹುನ್ನಾರವನ್ನು ಖಂಡಿಸಿದ್ದಾರೆ ಮತ್ತು ಇದು ಸರಿಯಲ್ಲ ಎಂಬುದನ್ನು ಬಿಜೆಪಿಯ ಹೈಕಮಾಂಡ್ ಗಮನಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ.
ಇದೇ ವೇಳೆ ಮಾತನಾಡಿದ ತಾಲೂಕು ವೀರಶೈವ ಮಹಾಸಭಾ ಅಧ್ಯಕ್ಷ ಶಿವಶಂಕರ್.. ಈ ಪ್ರಸಕ್ತ ಸಂದರ್ಭದಲ್ಲಿ ಮುಖ್ಯ ಮಂತ್ರಿ ಬದಲಾವಣೆ ಸರಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ವೀರಶೈವ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಸ್ವಾಮಿ ಮಾತನಾಡಿ ವೀರಶೈವ ಸ್ವಾಮೀಜಿಗಳನ್ನ ಅವಹೇಳನ ಮಾಡುತ್ತಿರುವುದು ಖಂಡನೀಯ ಯಡಿಯೂರಪ್ಪ ಎಲ್ಲಾ ಜಾತಿ ವರ್ಗದ ಅಧಿನಾಯಕ ಎಂದು ತಿಳಿಸಿದರು.ಇನ್ನು ಪ್ರತಿಭಟನೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ.ಜಿಲ್ಲಾ ಅಧ್ಯಕ್ಷರು ಹೆಚ್.ಎಂ.ಲೋಕೇಶ್. ವೀರಶೈವ ಲಿಂಗಾಯತ ಸಮಾಜ ಅಧ್ಯಕ್ಷರು ಬಿ.ಎ.ಶಿವಶಂಕರ್ .ಬಿಜೆಪಿ ಮುಖಂಡ ನಿರಂಜನ್.ಸಮಾಜದ ಮುಖಂಡರು ಸೇರಿದಂತೆ ಮತ್ತಿತರು ಭಾಗ ವಹಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g