ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪೌರ ಕಾರ್ಮಿಕರ ಪ್ರತಿಭಟನೆ
1 min readಚಿಕ್ಕಮಗಳೂರು: ಹೊರಗುತ್ತಿಗೆ ಪೌರಕಾರ್ಮಿಕರ ಕೆಲಸ ಖಾಯಂಗೊಳಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ಸ್ವಚ್ಛತೆ ಮತ್ತು ಕುಡಿ ಯುವ ನೀರು ಸರಬರಾಜು ಸ್ಥಗಿತಗೊಳಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಆಜಾದ್ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಕಾರರು ಹೊರಗುತ್ತಿಗೆ ಪದ್ಧತಿ ರದ್ಧಾಗಬೇಕು. ವಾಹನ ಚಾಲಕರು, ನೀರುಗಂಟಿಗಳು ಮತ್ತು ಡಾಡಾ ಆಪರೇಟರ್ಸ್ ವೇತನ ನೆರಪಾವತಿಯಾಬೇಕು. ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇ ಕೆಂದು ರಾಜ್ಯ ಸರ್ಕಾರವನ್ನು ಇದೇ ವೇಳೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಹುಜನ ಸಮಾಜ ಪಕ್ಷದ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಪ್ರತೀನಿತ್ಯ ನಗರವನ್ನು ಸ್ವಚ್ಛಗೊಳಿಸಿ ಪೌರಕಾರ್ಮಿಕರ ವೇತನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡ ಬೇಕು ಹಾಗೂ ಹೊರಗುತ್ತಿಗೆ ಆಧಾರ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಕೆಲಸವನ್ನು ಖಾಯಂಗೊಳಿಸಬೇಕೆಂದು ತಿಳಿಸಿದರು.
ಮಾನವ ಹಕ್ಕು ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಹೊನ್ನೇಶ್ ಮಾತನಾಡಿ, ಹೊರಗುತ್ತಿಗೆ ಪೌರಕಾರ್ಮಿಕ ಕೆಲಸವನ್ನು ಖಾಯಂಗೊಳಿಸಿ ವಸತಿ ಸೌಲಭ್ಯ ಸೇರಿದಂತೆ ವಿವಿಧ ಸೌಲಭ್ಯ ಗಳನ್ನು ನೀಡಬೇಕೆಂದು ಒತ್ತಾಯಿಸಿದರು.
ಸಂತೋಷ್ಕೋಟ್ಯಾನ್ ಮಾತನಾಡಿ, ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಮ್ಮಿಕೊಂಡಿರುವ ಹೋರಾಟವನ್ನು ಬೆಂಬಲಿಸುವುದಾಗಿ ತಿಳಿಸಿದರು.
ಆಶ್ರಯ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ಜಿಲ್ಲಾಧಿಕಾರಿ ಮತ್ತು ಶಾಸಕ ರೊಂದಿಗೆ ಚರ್ಚಿಸಿ ಬೇಡಿಕೆ ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು. ನಿರ್ಮಲಭಾರತಿ ಟ್ರಸ್ಟ್ ನಿರ್ದೇಶಕ ಸೀತಾರಾಂ ಭರಣ್ಯ ಮಾತನಾಡಿ ದರು.
ಪ್ರತಿಭಟನೆಯಲ್ಲಿ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಅಣ್ಣಯ್ಯ, ಸಿ.ಬಿ.ನಾಗರಾಜ್, ಮೂರ್ತಿ, ಹೊರಗುತ್ತಿಗೆ ಪೌರಕಾರ್ಮಿಕ ಸಂಘದ ಅಧ್ಯಕ್ಷ ಮುರುಗೇಶ್, ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸದಸ್ಯ ಕೆ.ಸಿ.ವಸಂತಕುಮಾರ್, ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಹುಣಸೆಮಕ್ಕಿ ಲಕ್ಷ್ಮಣ್, ಹರೀಶ್, ನಗರಸಭೆ ಸದಸ್ಯ ಗೋಪಿ ಸೇರಿದಂತೆ ಅನೇ ಕರು ಇದ್ದರು.
‘ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮನವಿ ಸ್ವೀಕರಿಸಿ ಮಾತನಾಡಿ, ಜಿಲ್ಲಾಡಳಿತದ ಹಂತದಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳನ್ನು ಈಡೇರಿಸಲಾಗುದುದು. ಸ್ವಚ್ಛತೆ ಕಾರ್ಯವನ್ನು ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿದ ಅವರು, 2018ರ ನೋಟಿಫಿಕೇಶನ್ ಪ್ರಕಾರ ಖಾಲಿ ಹುದ್ದೆಗಳನ್ನು ಇನ್ನೇರೆಡು ದಿನಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಪೌರಕಾರ್ಮಿಕರ ಬೇಡಿಕೆಗಳು:
** ಪೌರಕಾರ್ಮಿಕರು ಅಕಾಲಿಕ ಮರಣ ಹೊಂದಿದಲ್ಲಿ ಆ ಮನೆಯ ಸದಸ್ಯನಿಗೆ ಖಾಯಂ ಕೆಲಸ ನೀಡಬೇಕು.
** ಪೌರಕಾರ್ಮಿಕ ದಿನಾಚರಣೆ ದಿನದಂದು ನೀಡುವ ಬೋನಸ್ ಹೊರಗುತ್ತಿಗೆ ಕಾರ್ಮಿಕರಿ ಗೂ ನೀಡಬೇಕು.
** ಮಾಸಿಕ ರಜೆ ನೀಡಬೇಕು. ಲೋಡರ್ಸ್, ಕ್ಲೀನರ್ ವಾಹನ ಚಾಲಕರಿಗೂ, ಯುಜಿಡಿ ಕಾರ್ಮಿಕರಿಗೂ ವಿಮೆ ಮತ್ತು ಆರೋಗ್ಯ ತಪಾಸಣೆಯನ್ನು 3 ತಿಂಗಳಿಗೊಮ್ಮೆ ಮಾಡಬೇಕು.
** ಪೌರಕಾರ್ಮಿಕರು ಹಾಗೂ ಹೊರಗುತ್ತಿಗೆ ಕಾರ್ಮಿಕರ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶೇ.2ರಷ್ಟು ಮೀಸಲಾತಿ ನೀಡಬೇಕು.
** ಸಫಾಯಿ ಕರ್ಮಚಾರಿ ಜಾಗೃತಿ ಸಮಿತಿಗೆ ಈಗ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಪೌರಕಾರ್ಮಿಕರ ಮಾದರಿಯಲ್ಲೇ ನೇರಪಾವತಿ ಪೌರಕಾರ್ಮಿಕರು ಹಾಗೂ ಹೊರಗುತ್ತಿಗೆ ಕಾರ್ಮಿಕರನ್ನು ನೇಮಿಸಿಕೊಳ್ಳಬೇಕು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g