ವಿಶ್ವ ಶೌಚಾಲಯ ದಿನದಂದು ಸ್ವಚ್ಛತಾ ಜಾಥಾ
1 min readಚಿಕ್ಕಮಗಳೂರು: ಬೆಂಗಳೂರು ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ನಗರ ಸಭೆ ಇವರ ಸಹಯೋಗದಲ್ಲಿ ವಿಶ್ವ ಶೌಚಾಲಯ ದಿನದ ಅಂಗವಾಗಿ ಸ್ವಚ್ಛತಾ ಜಾಥಾ ಹಮ್ಮಿಕೊಳ್ಳಲಾಯಿತು.
ನಗರದ ಅಜಾದ್ ಪಾರ್ಕ್ ನಲ್ಲಿ ನಡೆದ ಸ್ವಚ್ಛತಾ ಜಾಥಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭಾ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರು ಚಿಕ್ಕಮಗಳೂರು ನಗರವನ್ನು ಒಂದು ಸ್ವಚ್ಛ ಸುಂದರ ಹಾಗೂ ಮಾದರಿ ನಗರವನ್ನಾಗಿ ಮಾಡಲು ನಗರಸಭೆಯು ಶ್ರಮಿಸುತ್ತಿದೆ, ಹಾಗೆಯೇ ಚಿಕ್ಕಮಗಳೂರು ನಗರವನ್ನು ಬಯಲು ಶೌಚ ಮುಕ್ತ ನಗರವನ್ನಾಗಿ ಮಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದರು.
ಅಲ್ಲದೇ ಚಿಕ್ಕಮಗಳೂರು ನಗರವನ್ನು ಬಯಲು ಶೌಚ ಮುಕ್ತ ನಗರವನ್ನಾಗಿ, ಪ್ಲಾಸ್ಟಿಕ್ ಮುಕ್ತ ಸ್ವಚ್ಚ ಹಾಗೂ ಸುಂದರ ನಗರವನ್ನಾಗಿ ಮಾಡಲು ಶ್ರಮಿಸುತ್ತೇನೆ ಎಂದು ಪ್ರತಿಜ್ಞೆ ಮಾಡಲಾಯಿತು. ಈ ಸಮಯದಲ್ಲಿ ನಗರಸಭೆಯ ಪೌರಾಯುಕ್ತರು, ನಗರಸಭೆಯ ಅಧಿಕಾರಿಗಳು, ಪೌರ ಕಾರ್ಮಿಕರು, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g