May 18, 2024

MALNAD TV

HEART OF COFFEE CITY

ನಗರಸಭೆಯಿಂದ 29 ನೇ ವಾರ್ಡ್‍ನಲ್ಲಿ ಸ್ವಚ್ಚತಾ ಆಂದೋಲನ

1 min read

ಚಿಕ್ಕಮಗಳೂರು-ನಗರಸಭೆ ವತಿಯಿಂದ ಮಂಗಳವಾರ ನಗರದ 29ನೇ ವಾರ್ಡ್‍ನ ನೆಹರೂ ನಗರದಲ್ಲಿ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ನಡೆಯಿತು.
ಕಳೆದ ಒಂದೂವರೆ ತಿಂಗಳಿನಿಂದ ನಗರಸಭೆ ಪೌರಕಾರ್ಮಿಕರಿಂದ ನಿರಂತರವಾಗಿ ಸ್ವಚ್ಚತಾ ಕಾರ್ಯ ನಡೆಯುತ್ತಿದ್ದು ಅದರಂತೆ ನೆಹರೂ ನಗರದಲ್ಲಿನ ರಸ್ತೆ, ಚರಂಡಿ ಸೇರಿದಂತೆ ಇನ್ನಿತರ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಚಗೊಳಿಸುವ ನಗರವನ್ನು ನಿರ್ಮಲವಾಗಿಸುವ ಕಾರ್ಯಕ್ಕೆ ನಗರಸಭೆ ಸಿಬ್ಬಂದಿಗಳು ಶ್ರಮಿಸಿದರು.
ನಗರಸಭೆ ಅಧ್ಯಕ್ಷ ವರಸಿದ್ದಿವೇಣುಗೋಪಾಲ್ ಮಾತನಾಡಿ ನಗರವನ್ನು ಸುಂದರ ಹಾಗೂ ಚೊಕ್ಕನಗರವನ್ನಾಗಿಸಲು ನಗರಸಭೆ ಸದಸ್ಯರು ಈಗಾಗಲೇ ನಿರ್ಣಯ ಕೈಗೊಂಡಿದ್ದು ಅದರಂತೆ ನಗರದ ಪ್ರತಿ ವಾರ್ಡ್‍ಗಳಲ್ಲಿ ವಾರಕ್ಕೊಮ್ಮೆ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇಂದು ನೆಹರೂ ನಗರದ ಸುತ್ತಮುತ್ತ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ನಗರದಲ್ಲಿರುವ ಖಾಲಿ ಜಾಗವನ್ನು ಮಾಲೀಕರುಗಳು ಸ್ವಚ್ಚವಾಗಿಟ್ಟುಕೊಳ್ಳಬೇಕು. ಇಲ್ಲವಾದಲ್ಲಿ ರೋಗರುಜಿನಗಳು ಹರಡಿ ಖಾಯಿಲೆಗೆ ಆಸ್ಪದ ನೀಡಿದಂತಾಗುತ್ತದೆ. ಈ ಬಗ್ಗೆ ಅನೇಕ ಬಾರಿ ತಿಳುವಳಿಕೆ ಮೂಡಿಸಲಾಗಿದೆ ಎಚ್ಚೆತ್ತುಕೊಳ್ಳದಿದ್ದಲ್ಲಿ ದಂಡ ವಿಧಿಸಿ ನಗರಸಭೆಯಿಂದಲೇ ಸ್ವಚ್ಚಗೊಳಿಸುವ ಮೂಲಕ ತಗುಲುವ ವೆಚ್ಚವನ್ನು ಅವರಿಂದಲೇ ಭರಿಸಲಾಗುವುದು ಎಂದರು.
ನಗರದಲ್ಲಿ ಯುಜಿಡಿ ಅಮೃತ್ ಕಾಮಗಾರಿಗಳು ತ್ವರಿತವಾಗಿ ನಡೆಯಿತ್ತಿದ್ದು ಕುಡಿಯುವ ನೀರು, ರಸ್ತೆ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು, ನಗರವನ್ನು ಸ್ವಚ್ಚವಾಗಿಟ್ಟುಕೊಳ್ಳಲು ಸಾರ್ವಜನಿಕರು ನಗರಸಭೆ ಜತೆ ಕೈಜೋಡಿಸುವಂತೆ ಕೇಳಿಕೊಂಡರು.

ಸದಸ್ಯ ಅಮೃತೇಶ್ ಮಾತನಾಡಿ 29ನೇ ವಾರ್ಡ್‍ನಲ್ಲಿ ಅನೇಕ ಕಾಮಗಾರಿಗಳು ಬಾಕಿ ಇದ್ದು ಅಂಗನವಾಡಿ, ಶುದ್ಧ ನೀರಿನ ಘಟಕ ನಿರ್ಮಾಣಗೊಳ್ಳಬೇಕಿದೆ. ಅಲ್ಲದೇ ಉದ್ಯಾನವನಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಗಿದೆ. ಇಲ್ಲಿನ ಪ್ರದೇಶದಲ್ಲಿ ಖಾಲಿ ನಿವೇಶನಗಳಿದ್ದು ಅಲ್ಲಿಗೆ ಬಹುತೇಕ ಬಂದು ತ್ಯಾಜ್ಯವನ್ನು ಎಸೆದುಹೋಗುತ್ತಿದ್ದಾರೆ ಈ ಬಗ್ಗೆ ತಿಳುವಳಿಕೆ ಮೂಡಿಸಿದರು ಎಚ್ಚೆತ್ತುಕೊಳ್ಳುತ್ತಿಲ್ಲ ಆದ್ದರಿಂದ ನಗರಸಭೆಯಿಂದ ಫಲಕಗಳನ್ನು ಅಳವಡಿಸುವಂತೆ ಕೇಳಿಕೊಂಡರು.

ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ ಕಳೆದ ಒಂದೂವರೆ ತಿಂಗಳಿನಿಂದ ನಗರದ ವಿವಿಧ ವಾರ್ಡ್‍ಗಳಲ್ಲಿ ಸ್ವಚ್ಚತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ರಸ್ತೆ, ಕುಡಿಯುವ ನೀರು ಸೇರಿದಂತೆ ಇನ್ನಿತರ ಸಮಸ್ಯೆಗಳನು ಜನರಿಂದ ಆಲಿಸಿ ಪರಿಹರಿಸುವ ಕ್ರಮ ಕೈಗೊಳ್ಳಲಾಗಿದೆ ಎಂದರು.
ಯುಜಿಡಿ ಹಾಗೂ ಅಮೃತ್ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಅಧಿಕಾರಿ ಸಿಬ್ಬಂಧಿಗಳಿಗೆ ಸೂಚನೆ ನೀಡಲಾಗಿದೆ. ಮುಂದಿನ ಮೂರು ತಿಂಗಳೊಳಗೆ ಪ್ರತಿ ವಾರ್ಡ್‍ಗಳಿಗೆ ಎಲ್‍ಇಡಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಆರೋಗ್ಯ ಪರಿವೀಕ್ಷಕರಾದ ವೆಂಕಟೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರ ಕುಮಾರ್, ನಗರಸಭೆ ಅಭಿಯಂತರರಾದ ಚಂದನ್, ರಶ್ಮಿ, ಮಿಥುನ ಸೇರಿದಂತೆ ಮತ್ತಿತರ ಸಿಬ್ಬಂದಿಗಳು ಹಾಜರಿದ್ದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!