May 15, 2024

MALNAD TV

HEART OF COFFEE CITY

ಸಿ.ಎಂ ಹಿಜಾಬ್ ಹೇಳಿಕೆ: ವಿದ್ಯಾರ್ಥಿಗಳಲ್ಲಿ ಕೋಮುವಾದ ಬಿತ್ತುವ ಹುನ್ನಾರ ಎಂದು ಸಿ.ಟಿ ರವಿ ಟೀಕೆ

1 min read

ಚಿಕ್ಕಮಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬರುವ ಕುರಿತು ಸಿ.ಎಂ ಸಿದ್ದರಾಮಯ್ಯ ಹೇಳಿಕೆ ವಿದ್ಯಾರ್ಥಿಗಳಲ್ಲಿ ಕೋಮುವಾದ ಬಿತ್ತುವ ಹುನ್ನಾರವಾಗಿದ್ದು, ಮತ ಓಲೈಕೆ ಕೋಮುವಾದದ ನಿರ್ಣಯ ಕೈಕೊಂಡಿದ್ದಾರೆ ಎಂದು ಮಾಜಿ ಶಾಸಕ ಸಿ.ಟಿ ರವಿ ಟೀಕಿಸಿದ್ದಾರೆ.

ಬಿಜೆಪಿ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ನಿಷೇಧ ಮಾಡಿರಲಿಲ್ಲ, ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಇರಬೇಕು ಎಂದು 1964ರ ಶಿಕ್ಷಣ ಕಾಯ್ದೆ ಪ್ರಕಾರ ನಿಯಮಾವಳಿಗಳನ್ನು ರೂಪಿಸಿದ ನಂತರದಲ್ಲಿ ವಸ್ತ್ರ ಸಂಹಿತೆ ಜಾರಿಗೆ ಬಂದಿದೆ. ಆಯಾ ಶಾಲಾ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಯಾವ ರೀತಿಯ ವಸ್ತ್ರಗಳನ್ನು ವಿನ್ಯಾಸಗೊಳಿಸಬೇಕು ಎಂದು ನಿರ್ಣಯ ಮಾಡಬೇಕು. ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಶಾಲಾ ಅಭಿವೃದ್ಧಿ ಸಂಸ್ಥೆ ಅವರು ಯಾವ ರೀತಿಯ ವಸ್ತ್ರವಿನ್ಯಾಸವನ್ನು ನಿರ್ಣಯ ಮಾಡಬೇಕು ಎಂದು ಸ್ಪಷ್ಟವಾಗಿ ಕಾಯ್ದೆಯಲ್ಲಿ ಹೇಳಿದ್ದು, ವಿದ್ಯಾರ್ಥಿಗಳ ಮನಸ್ಸಿನಲ್ಲಿ ಬಡವ ಶ್ರೀಮಂತ ಎಂಬ ಭೇದಭಾವ ಬರಬಾರದು ಎಂದು ಸಿ.ಟಿ ರವಿ ಹೇಳಿದ್ದಾರೆ. ನಾವೆಲ್ಲರೂ ಒಂದೇ ಎಂಬ ಮನೋಭಾವ ಅವರಲ್ಲಿ ಮೂಡಬೇಕು ಎಂಬ ಉದ್ದೇಶದಿಂದ ಈ ಯೋಜನೆಯ ಜಾರಿ ಮಾಡಿದ್ದಾರೆ. ಹಿಜಾಬ್ ಎಂಬುದು ಸಮವಸ್ತ್ರದ ಭಾಗವಾಗಿದ್ದಲ್ಲಿ ಅದನ್ನ ಧರಿಸಬಹುದು. ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಣಯ ವಸ್ತ್ರ ಇರಬೇಕು ಎಂಬ ಶಿಕ್ಷಣ ತಜ್ಞರ ಅಪೇಕ್ಷೆಗೆ ವಿರುದ್ಧವಾಗುತ್ತದೆ ಎಂದು ಹೇಳಿದರು.
ಮತದ ಓಲೈಕೆಗೆ, ಓಟಿನ ಆಸೆಗಾಗಿ ಕೋಮುವಾದ ನಿರ್ಣಯವನ್ನು ತೆಗೆದುಕೊಂಡರೆ, ಇನ್ನೊಬ್ಬರು ಮತ್ತೊಂದು ಬಣ್ಣದ ಶಾಲನ್ನ, ಟೋಪಿ ಧರಿಸಿ ಬರುವುದಕ್ಕೆ ಪ್ರೇರಣೆ ನೀಡಿದಂತಾಗುತ್ತದೆ. ಎಂದು ರವಿ ಹೇಳಿದ್ದಾರೆ. ಇದರ ಪರಿಣಾಮವಾಗಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಕೋಮುವಾದದ ಭಾವನೆ ಹೆಚ್ಚಿಸಿದಂತಾಗುತ್ತದೆ ಅಲ್ಲದೆ ವಿದ್ಯಾರ್ಥಿಗಳಲ್ಲಿ ಜಾತಿ ಎಂಬ ವಿಷ ಬೀಜವನ್ನು ಬಿತ್ತಿದಂತಾಗುತ್ತದೆ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!