ನಗರೋತ್ಥಾನದಡಿ ರೂ.40 ಕೋಟಿ ಅನುದಾನ ನೀಡಲು ಸಿಎಂ ವಾಗ್ದಾನ: ಸಿ.ಟಿ ರವಿ
1 min readಚಿಕ್ಕಮಗಳೂರು-4ನೇ ಹಂತದ ನಗರೋತ್ಥಾನ ಯೋಜನೆ ಅಡಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರಸಭೆಗೆ 40 ಕೋಟಿ ರೂಗಳ ಅನುದಾನ ನೀಡುವ ಬಗ್ಗೆ ವಾಗ್ದಾನ ನೀಡಿದ್ದಾರೆ ಎಂದು ಶಾಸಕ ಸಿ.ಟಿ ರವಿ ಹೇಳಿದರು.ನಗರದ ಶಂಕರಪುರ ಕೊಳಗೇರಿ ನಿವಾಸಿಗಳ ಮನೆಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ನಗರದ ಉಪ್ಪಳ್ಳಿಯಲ್ಲಿ ಪ್ರಧಾನ ಮಂತ್ರಿ ಆವಾಜ್ ಯೋಜನೆ ಅಡಿಯಲ್ಲಿ 1511 ಜಿಪ್ಲಸ್ 2 ಮಾದರಿಯ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಕೊಳಗೇರಿ ನಿವಾಸಿಗಳಿಗೆ ಮೊದಲ ಹಂತದಲ್ಲಿ 280 ಮನೆಗಳ ಮಂಜೂರಾತಿ ನೀಡಿದ್ದು ಇದೀಗ 2ನೇ ಹಂತದಲ್ಲಿ 500 ಮನೆಗಳ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದರು.
ಪ್ರತಿಯೊಬ್ಬ ಬಡವರಿಗೂ ಸೂರು ಒದಗಿಸಬೇಕು ಎಂಬ ಆಶಯಯೊಂದಿಗೆ ಚಿಕ್ಕಮಗಳೂರು ನಗರದಲ್ಲಿ ಇದೇ ಮೊದಲ ಬಾರಿಗೆ ವಿವಿಧ ಯೋಜನೆ ಅಡಿಯಲ್ಲಿ 2300 ಕ್ಕೂ ಹೆಚ್ಚು ಮನೆಗಳ ನಿರ್ಮಾಣಕ್ಕೆ ಏಕಕಾಲದಲ್ಲಿ ಮಂಜೂರಾತಿ ದೊರೆತಿದೆ. ಪ್ರತಿ ಮನೆಗಳ ನಿರ್ಮಾಣ ವೆಚ್ಚದ 5 ಲಕ್ಷದ್ದಾಗಿದ್ದು, ಮನೆ ನಿರ್ಮಿಸಲು ಸರ್ಕಾರದಿಂದ 3.50 ಲಕ್ಷ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತ ವರ್ಗಕ್ಕೆ ಆಯಾ ಇಲಾಖೆಯಿಂದ ಸಬ್ಸಿಡಿ ಹಣ ಮಂಜೂರಾಗಲಿದೆ ಉಳಿಕೆ ಹಣವನ್ನು ಬ್ಯಾಂಕ್ಗಳ ಮೂಲಕ ಸಾಲದ ರೂಪದಲ್ಲಿ ಪಡೆದುಕೊಳ್ಳಬಹುದಾಗಿದೆ. ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ಹೆಚ್ಚಿನ ಸೌಲಭ್ಯದೊರೆಯಲಿದೆ ಎಂದು ತಿಳಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g