ಕಾಫಿನಾಡಲ್ಲಿ ಕಾಡಾನೆ ದಾಂಧಲೆ, ಕಾಫಿ, ಅಡಿಕೆ ತೋಟ ನಾಶ..!
1 min readಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಮತ್ತೆ ಕಾಡಾನೆಗಳ ಹಾವಳಿ ಆರಂಭವಾಗಿದ್ದು ಚಿಕ್ಕಮಗಳೂರು ತಾಲೂಕಿನ ಆನೆಗನ ಹಳ್ಳಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ದಾಂಧಲೆ ನಡೆಸಿವೆ. ಗ್ರಾಮದ ಅಣ್ಣೇಗೌಡ ಹಾಗೂ ಹರೀಶ್ ಎಂಬುವವರ ಅಡಿಕೆ, ಕಾಫಿ ತೋಟಕ್ಕೆ ನುಗ್ಗಿ ಕಾಡಾನೆಗಳು ದಾಂಧಲೆ ನಡೆಸಿವೆ. ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಬೆಳೆ ನಾಶವಾಗಿದೆ. ಕಾಡಾನೆ ದಾಳಿಯಿಂದ ನೂರಾರು ಅಡಿಕೆ ಮರಗಳನ್ನು ನೆಲಕ್ಕೆ ಉರುಳಿ ಬಿದ್ದಿವೆ, ನೆಲಕ್ಕೆ ಬಿದ್ದ ಅಡಿಕೆ ಮರಗಳನ್ನು ನೋಡಿ ರೈತರು ಕಣ್ಣೀರಿಡುವಂತಾಗಿದೆ. ದಿನ ಬಿಟ್ಟು ದಿನ, ದಾಳಿ ಮಾಡಿ ಅಡಿಕೆ, ಕಾಫಿ, ಬಾಳೆ, ತೆಂಗು ಬೆಳೆಗಳನ್ನ ಕಾಡಾನೆ ನಾಶ ಮಾಡುತ್ತಿದ್ದು ಕೂಡಲೇ ಅರಣ್ಯ ಅಧಿಕಾರಿಗಳಿಗೆ ಇತ್ತ ಗಮನ ಹರಿಸಬೇಕೆಂದು ಸ್ಥಳೀಯ ರು ಒತ್ತಾಯಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g