May 6, 2024

MALNAD TV

HEART OF COFFEE CITY

ನಿರಂತರ ಮಳೆಗೆ ನೆಲಕಚ್ಚಿದ ಕಾಫಿ ಬೆಳೆ, ಕಣ್ಣೀರಲ್ಲೆ ಕೈ ತೊಳೆಯುತ್ತಿದ್ದಾರೆ ಕಾಫಿ ಬೆಳೆಗಾರರು

1 min read

ಚಿಕ್ಕಮಗಳೂರು : ಅತಿವೃಷ್ಠಿಯಿಂದ ಕಾಫಿನಾಡಿನ ಬಹುತೇಕ ಕಾಫಿ ಇಂದು ಮಣ್ಣುಪಾಲಾಗಿದ್ದು ಬೆಳೆಗಾರರು ಆತಂಕದಲ್ಲೇ ಬದುಕುವಂತಹ ಪರಿಸ್ಥಿತಿ ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿದೆ.

ದೂರದ ಬೆಟ್ಟ ಕಣ್ಣಿಗೆ ನುಣ್ಣ ಎಂಬಂತಾಗಿದೆ ಬೆಳೆಗಾರರ ಬಾಳು. ಅತಿವೃಷ್ಠಿಯಿಂದ ಕಾಫಿನಾಡಿನ ಬಹುತೇಕ ಕಾಫಿ ಇಂದು ಮಣ್ಣುಪಾಲಾಗಿದ್ದು ಬೆಳೆಗಾರರು ಆತಂಕದಲ್ಲೇ ಬದುಕುವಂತಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಸೇರಿದಂತೆ ಮಲೆನಾಡ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಕಾಫಿ ಫಸಲು ಮಣ್ಣು ಪಾಲಾಗಿದೆ. ಕಳೆದೊಂದು ತಿಂಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕಾಫಿ ಬೆಳೆ ಹೇಳ ಹೆಸರಿಲ್ಲದಂತಾಗಿದೆ. ಮಳೆ ಜೊತೆ ಬೀಸ್ತಿರೋ ರಣ ಗಾಳಿ ಕಾಫಿಯನ್ನ ಗಿಡದಿಂದ ಸಂಪೂರ್ಣ ನೆಲಕ್ಕುದುರಿಸಿದೆ. ಕಾಫಿ ಉಳಿದ್ರೆ ಬದುಕು ಉಳಿದಂತೆ ಎಂದು ಭಾವಿಸಿದ್ದ ಬೆಳೆಗಾರರಿಗೆ ಈ ಬಾರಿಯೂ ವರುಣದೇವ ಅನಾಹುತ ತಂದೊಡ್ಡಿ ಮತ್ತೆ ಚಿಂತಿಸುವಂತಾಗಿದೆ. ಅದರಲ್ಲೂ ಕಳೆದ ಹತ್ತು ದಿನಗಳಿಂದ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸುತ್ತಮುತ್ತ ಭಾರೀ ಮಳೆಯಾಗಿದ್ದು, ರೈತರು ತೋಟದ ಪರಿಸ್ಥಿತಿಯನ್ನ ಕಂಡು ಕಣ್ಣಿರಿಡುವಂತಾಗಿದೆ. ಗಿಡವನ್ನ ಮುಟ್ಟಿದರೆ ಕಾಫಿ ನೆಲಕ್ಕುದುರುವ ಸ್ಥಿತಿ ನಿರ್ಮಾಣವಾಗಿದೆ.

ಕಾಫಿನಾಡು ಚಿಕ್ಕಮಗಳೂರು ಅಂದಾಕ್ಷಣ ನೆನೆಪಾಗೋದೆ ಕಾಫಿತೋಟ. ಆದರೆ, ದೀಪದ ಕೆಳಗೆ ಕತ್ತಲು ಎಂಬಂತಾಗಿದೆ ಕಾಫಿಬೆಳೆಗಾರರ ಬದುಕು. ಕಳೆದ ಮೂರು ವರ್ಷದಿಂದ ಬೆಳೆಗಾರರು ಕಾಫಿಯನ್ನ ನಿರಂತರವಾಗಿ ಕಳೆದುಕೊಳ್ತಿದ್ದಾರೆ. ಕಳೆದ ಎರಡು ವರ್ಷವೂ ಕೂಡ ಮಹಾಮಳೆಯಿಂದ ಬೆಳೆಗಾರರು ಶೇಕಡ 60 ರಷ್ಟು ಕಾಫಿಯನ್ನ ಕಳೆದುಕೊಂಡ ಬೆಳೆಗಾರರು ಮರುಗಿದ್ರು. ಈ ಬಾರಿಯಾದ್ರು ಮಳೆರಾಯ ನಮ್ಮ ಮೇಲೆ ಕೃಪೆ ತೋರಬಹುದು ಅಂತಾನೇ ಎಲ್ಲರೂ ಭಾವಿಸಿದ್ರು. ಆದ್ರೆ, ಈ ಬಾರಿಯೂ ಭಾರೀ ಮಳೆಯ ಜೊತೆಗೆ ಬಿರುಗಾಳಿ ಆರ್ಭಟಕ್ಕೆ ಕಾಫಿ ಫಸಲು ಮಣ್ಣುಪಾಲಾಗಿದೆ. ಕಾಫಿ ಫಸಲಿನ ಜೊತೆಗೆ ಕಾಫಿ ಗಿಡಗಳು ಕೂಡ ತೀವ್ರ ಶೀತದಿಂದ ಸಾಯುತ್ತಿದ್ದು ಭವಿಷ್ಯದ ಬಗ್ಗೆ ಬೆಳೆಗಾರರು ಕಂಗಾಲಾಗಿದ್ದಾರೆ. ಡಿಸೆಂಬರ್-ಜನವರಿಯಲ್ಲಿ ಹಣ್ಣು ಆಗಬೇಕಿದ್ದ ಕಾಫಿ, ಈಗಾಗಲೇ ಕೆಂಪು ಬಣ್ಣಕೆ ತಿರುಗಿ ಹಣ್ಣಾಗಿದೆ. ಅಷ್ಟೇ ಅಲ್ಲದೇ ಮಳೆಯ ಹೊಡೆತಕ್ಕೆ ಕಾಫಿ ಉದುರಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಒಟ್ಟಾರೆ, ಈ ವರ್ಷವೂ ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರು ಸಂಪೂರ್ಣ ಹೈರಾಣಾಗಿದ್ದಾರೆ. ಒಂದು ಎಕರೆ ಕಾಫಿ ತೋಟವನ್ನ ಕಾಪಾಡಿಕೊಳ್ಳಬೇಕಂದ್ರೆ ವರ್ಷಕ್ಕೆ ಕನಿಷ್ಠ 1 ಲಕ್ಷ ಬೇಕು. ಆದ್ರೆ, ಸತತ 3ನೇ ವರ್ಷ ಕಾಫಿ ಬೆಳೆಗಾರರು ಕಾಫಿಯನ್ನ ಕಳೆದುಕೊಳ್ಳುತ್ತಿರೋದ್ರಿಂದ ಭವಿಷ್ಯದ ಮೇಲೆ ಆತಂಕದ ಕಾರ್ಮೋಡ ಎದುರಾಗಿದೆ. ಹಾಗಾಗಿ, ಬೆಳೆಗಾರರು ಸೂಕ್ತ ಪರಿಹಾರ ಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಕೂಡಲೇ ಕೇಂದ್ರ್-ರಾಜ್ಯ ಸರ್ಕಾರ ಸಂಕಷ್ಟದಲ್ಲಿರೋ ಕಾಫಿ ಬೆಳೆಗಾರರ ನೆರವಿಗೆ ಬರಬೇಕೆಂದು ಆಗ್ರಹಿಸಿದ್ದಾರೆ. ಸರ್ಕಾರ ಏನ್ ಮಾಡುತ್ತೋ ದೇವರೇ ಬಲ್ಲ.
ಸತತ ಮಳೆಗೆ ನೆಲಕ್ಕುರುಳುತ್ತಿವೆ ಕಾಫಿ ಬೆಳೆ, ದಯವಿಟ್ಟು ನಮ್ಮ ರಕ್ಷಣೆಗೆ ಬನ್ನಿ ಅಂತ ಸರ್ಕಾರಕ್ಕೆ ಮೊರೆಯಿಡುತ್ತಿರುವ ಕಾಫಿ ಬೆಳೆಗಾರರು, ನಿರಂತರ ಮಳೆಗೆ ನೆಲಕಚ್ಚಿದ ಕಾಫಿ ಬೆಳೆ, ಕಣ್ಣೀರಲ್ಲೆ ಕೈ ತೊಳೆಯುತ್ತಿದ್ದಾರೆ ಕಾಫಿ ಬೆಳೆಗಾರರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!