ಹುಲಿ ಉಗುರು ಪ್ರಕರಣ; ಅರಣ್ಯ ಅಧಿಕಾರಿ ಮೇಲೆ ದೂರು..!
1 min readಚಿಕ್ಕಮಗಳೂರು: ಕಾಫಿನಾಡಿನಲ್ಲಿ ಹುಲಿ ಉಗುರು ಧರಿಸಿದ್ದ ಜನರ ಸಾಲು-ಸಾಲು ಬಂಧನವಾಗುತ್ತಿದ್ದು ಇದೀಗ ಅದೇ ಸಾಲಿಗೆ ಅರಣ್ಯ ಅಧಿಕಾರಿ ಒಬ್ಬರು ಸಿಲುಕಿದ್ದಾರೆ. ಕಾಫಿನಾಡಿಗೆ ಹುಲಿ ಉಗುರಿನ ಕಂಟಕವಾಗಿದೆ. ಇದೀಗ ಕಳಸದ ಡಿ.ಆರ್.ಎಫ್.ಓ. ದರ್ಶನ್ ಹುಲಿ ಉಗುರು ಧರಿಸಿದ್ದಾರೆ ಎಂದು ಅವರ ವಿರುದ್ದ ದೂರು ನೀಡಲಾಗಿದೆ. ದರ್ಶನ್ ಚಿಕ್ಕಮಗಳೂರು ತಾಲೂಕು ಆಲ್ದೂರು ಮೂಲದವರು. ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಮೇಲೆ ಅರೆನೂರು ಗ್ರಾಮದ ಸುಪ್ರೀತ್, ಅಬ್ದುಲ್ ಎಂಬುವವರು ಲಿಖಿತ ದೂರು ನೀಡಿದ್ದಾರೆ. ಇವರು ಹುಲಿ ಉಗುರು ಧರಿಸಿದ್ದಾರೆ ಸೂಕ್ತ ಕ್ರಮ ಕೈಗೊಂಡು, ವನ್ಯ ಜೀವಿ ಕಾಯ್ದೆಯಲ್ಲಿ ಪ್ರಕರಣ ದಾಖಲಿಸುವಂತೆ ಹೇಳಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g